ನೇತ್ರಾವತಿ ನದಿಯಲ್ಲಿ ಆತ್ಮಹತ್ಯೆ ? ನದಿಗೆ ಜಿಗಿದ ಬಂಟ್ವಾಳದ ಮಹಿಳೆ

ಬಂಟ್ವಾಳ : ಜೀವನದಲ್ಲಿ ನೊಂದಿದ್ದ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳದ ಮಹಿಳೆಯೊಬ್ಬರು ಪಾಣೆಮಂಗಳೂರು ನೂತನ ಸೇತುವೆ ಬಳಿ ನೇತ್ರಾವತಿ ನದಿಗೆ ಹಾರಿ ಆತ್ಮಹತ್ಯೆ ಮಾಡಿರುವ ಶಂಕೆ ವ್ಯಕ್ತವಾಗಿದೆ.ಸ್ಥಳೀಯ ಮುಳುಗುತಜ್ಞರಿಂದ ಮಹಿಳೆಗಾಗಿ ನದಿಯಲ್ಲಿ ಹುಡುಕಾಟ ನಡೆಯುತ್ತಿದೆ ಎಂದು ತಿಳಿದು ಬಂದಿದೆ.

ಬಂಟ್ವಾಳ ತಾಲೂಕಿನ ಸಜೀಪ ಮೂಡ ಗ್ರಾಮದ ನಿವಾಸಿಯಾಗಿರುವ ಮಹಿಳೆಯೋರ್ವರು ಅನಾರೋಗ್ಯದಿಂದ ಬಳಲುತ್ತಿದ್ದು ನದಿಗೆ ಹಾರಿ ಆತ್ಮಹತ್ಯೆ ಮಾಡಿರಬೇಕು ಎಂದು ಶಂಕಿಸಲಾಗಿದೆ.

ಆ ಮಹಿಳೆಯು ಬಿಸಿರೋಡಿನ ಚಿಕ್ಕಯ್ಯಮಠ ಎಂಬಲ್ಲಿರುವ ಅಕ್ಕನ ಮನೆಯಲ್ಲಿ  ಕೆಲದಿನಗಳಿಂದ ತಂಗಿದ್ದರು.ಶುಕ್ರವಾರ ರಾತ್ರಿ ಎಂದಿನಂತೆ ಊಟ ಮಾಡಿ ಮಲಗಿದ್ದ ಮಹಿಳೆ ಮುಂಜಾನೆ 5 ಗಂಟೆಯ ವೇಳೆ ಮನೆಯಿಂದ ಕಾಣೆಯಾಗಿದ್ದಾರೆ.

ಮನೆಯವರು ಹುಡುಗಾಟ ನಡೆಸಿದಾಗ ಪಾಣೆಮಂಗಳೂರು ನೂತನ ಸೇತುವೆಯ ಮೇಲೆ ಮಹಿಳೆ ಬಳಸುತ್ತಿದ್ದ ಶಾಲು ಹಾಗೂ ಕೈಯಲ್ಲಿದ್ದ ಬಳೆ ಬಿದ್ದಿದೆ. ಹಾಗಾಗಿ ಅವರು ನೇತ್ರಾವತಿ ಸೇತುವೆಯಿಂದ ಕೆಳಗೆ ಹಾರಿ ಆತ್ಮಹತ್ಯೆ ಮಾಡಿರಬಹುದು ಎಂಬ ಶಂಕೆ ವ್ಯಕ್ತಪಡಿಸಿದ್ದಾರೆ.

ಆ ಮಹಿಳೆ  ಈ ಹಿಂದೆಯೂ ಮನೆಯಲ್ಲಿ ಆತ್ಮಹತ್ಯೆಗೆ ಪ್ರಯತ್ನ ಮಾಡಿದ್ದರು ಎಂದು ಹೇಳಲಾಗಿದೆ.

ಬಂಟ್ವಾಳ ನಗರ ಠಾಣಾ ಪೋಲೀಸರು ಸ್ಥಳಕ್ಕೆ ಭೇಟಿ ನೀಡಿದ್ದಾರೆ.ಪೊಲೀಸರು ಪರಿಶೀಲನೆ ನಡೆಸುತ್ತಿದ್ದಾರೆ.

error: Content is protected !!
Scroll to Top