ಮಂಗಳೂರು : ಕೊರೊನಾ ಸೋಂಕು ಸೋಂಕು ಹರಡುವಿಕೆಯ ಸರಪಣಿಯನ್ನು ತುಂಡರಿಸಲು ದ.ಕ. ಜಿಲ್ಲಾಡಳಿತ ಮತ್ತೆ ಲಾಕ್ ಡೌನ್ ಮೊರೆ ಹೋಗಿದೆ. ಜಿಲ್ಲೆಯಾದ್ಯಂತ ಕೋವಿಡ್ 19 ಸೋಂಕಿನ ಹಬ್ಬುವಿಕೆ ಏರುಗತಿಯಲ್ಲಿದೆ.
ಇದರನ್ವಯ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಜುಲೈ 16 ರಾತ್ರಿ 8ರಿಂದ ಜುಲೈ 23ರ ಬೆಳಿಗ್ಗೆ 5 ಗಂಟೆಯವರೆಗೆ ಸಂಪೂರ್ಣ ಲಾಕ್ ಡೌನ್ ಗೆ ದಕ್ಷಿಣಕನ್ನಡ ಜಿಲ್ಲಾಧಿಕಾರಿ ಸಿಂಧೂ ಬಿ.ರೂಪೇಶ್ ಆದೇಶ ಹೊರಡಿಸಿದ್ದಾರೆ.
ಈ ಹಿನ್ನೆಲೆಯಲ್ಲಿ ಜಿಲ್ಲಾಡಳಿತ ಕೆಲವೊಂದು ಮಾರ್ಗಸೂಚಿಗಳನ್ನು ಬಿಡುಗಡೆ ಮಾಡಿದೆ.
ಏನಿರುತ್ತೆ? :
* ಜನರಿಗೆ ಅಗತ್ಯ ವಸ್ತುಗಳ ಖರೀದಿಗೆ ಮಾತ್ರ ಅವಕಾಶ.
* ಬೆಳಗ್ಗೆ 8 ಗಂಟೆಯಿಂದ 11 ಗಂಟೆಯವರೆಗೆ ಅಗತ್ಯ ವಸ್ತುಗಳ ಖರೀದಿಗೆ ಅವಕಾಶ.
* ದಿನಸಿ, ಹಣ್ಣು, ತರಕಾರಿ ಮಾಂಸದ ಅಂಗಡಿಗಳು ಓಪನ್ ಇರುತ್ತವೆ.
*ಹೆದ್ದಾರಿಗಳಲ್ಲಿ ಸರಕುಸಾಗಾಟ ವಾಹನಗಳಿಗೆ ಮಾತ್ರ ಅವಕಾಶ
* ಆರೋಗ್ಯ ಸೇರಿದಂತೆ ತುರ್ತು ಸೇವೆಗಳು ಲಭ್ಯ
* ಅಗತ್ಯ ಸರ್ಕಾರಿ ಕಚೇರಿಗಳು ಓಪನ್
ಏನಿರಲ್ಲ ?
*ಬಾರ್, ಮಾಲ್, ವೈನ್ ಶಾಪ್ ಗಳು ಸಂಪೂರ್ಣ ಬಂದ್
* ವಾಣಿಜ್ಯ ಮತ್ತು ಖಾಸಗಿ ಸಂಸ್ಥೆಗಳೂ ಸಂಪೂರ್ಣ ಬಂದ್
* ಕಂಟೈನ್ಮೆಂಟ್ ಝೋನ್ ಸಂಪೂರ್ಣ ಬಂದ್
* ಸಾರ್ವಜನಿಕ, ಖಾಸಗಿ ಸಾರಿಗೆ ಸಂಚಾರ ಬಂದ್