ಕೊಡಗಿನಲ್ಲಿ ಭಾರಿ ಮಳೆಗೆ ಭೂ ಕುಸಿತ  -ಬ್ರಹ್ಮಗಿರಿ ಬೆಟ್ಟ ಕುಸಿದು ಅರ್ಚಕ ಕುಟುಂಬ  ನಾಪತ್ತೆ

ಮಡಿಕೇರಿ,ಆ. 6 : : ಕೊಡಗು ಜಿಲ್ಲೆಯಲ್ಲಿ ಭಾರೀ ಮಳೆಯಾಗುತ್ತಿದ್ದು,ಮತ್ತೆ ಭೂ ಕುಸಿತದ ಭೀತಿ ತಲೆದೋರಿದೆ.  ತಲಕಾವೇರಿಯಲ್ಲಿ ಭೂಕುಸಿತವಾಗಿ ನಾಲ್ವರು ಕಣ್ಮರೆಯಾಗಿದ್ದಾರೆ ಎಂದು ಕೊಡಗು ಜಿಲ್ಲಾಡಳಿತ ಮೂಲಗಳು ತಿಳಿಸಿವೆ. .
ತಲಕಾವೇರಿ ಕ್ಷೇತ್ರದ ಪ್ರಧಾನ ಅರ್ಚಕ ಟಿ.ಎಸ್.ನಾರಾಯಣ ಆಚಾರ್, ಪತ್ನಿ, ಆನಂದತೀರ್ಥ ಮತ್ತು ಇಬ್ಬರು ಅರ್ಚಕರು ನಾಪತ್ತೆಯಾಗಿದ್ದು, ಮಣ್ಣಿನಡಿ ಸಿಲುಕಿರುವ ಶಂಕೆ ವ್ಯಕ್ತವಾಗಿದೆ. ಸ್ಥಳೀಯರಿಂದ ತೆರವು ಕಾರ್ಯಾಚರಣೆ ನಡೆಯುತ್ತಿದೆ.
ಬೆಟ್ಟಸಾಲಿನಲ್ಲಿ ಸುಮಾರು 6 ಕಿ.ಮೀ. ಉದ್ದಕ್ಕೆ ಭೂ ಕುಸಿತವಾಗಿದೆ ಎನ್ನಲಾಗಿದೆ. ಎರಡು ಮನೆಗಳು  ಎರಡು ಕಾರು, 20ಕ್ಕೂ ಹೆಚ್ಚು ಹಸುಗಳು ಮಣ್ಣುಪಾಲಾಗಿವೆ ಎಂದು ವರದಿಯಾಗಿದೆ. ಮಂಜು, ಮಳೆಯಿಂದಾಗಿ ರಕ್ಷಣಾ ಕಾರ್ಯಾಚರಣೆಗೆ ತೊಡಕಾಗಿದೆ. ತಲಕಾವೇರಿ ಪ್ರದೇಶದಲ್ಲಿ ಭಾರೀ ಮಳೆಯಾಗುತ್ತಿದ್ದು, ಬೆಟ್ಟದಲ್ಲಿ ಮಣ್ಣು ಕುಸಿಯುತ್ತಲೇ ಇದೆ. ಈ ಕಾರಣದಿಂದಾಗಿ ಕಾರ್ಯಚರಣೆಯ ತಂಡಕ್ಕೆ ಆ ಪ್ರದೇಶಕ್ಕೆ ತೆರಳಲು ಕಷ್ಟವಾಗುತ್ತಿದೆ.







































error: Content is protected !!
Scroll to Top