ಹಿರ್ಗಾನ : ಪೌಷ್ಠಿಕ ಆಹಾರ ಮೇಳ

ಕಾರ್ಕಳ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಕಾರ್ಕಳ, ಮಹಿಳಾ ಜ್ಞಾನ ವಿಕಾಸ ಕೇಂದ್ರ,  ರೋಟರಿ ಆನ್ಸ್ ಕ್ಲಬ್ ಕಾರ್ಕಳ ಇದರ ವತಿಯಿಂದ ಹಿರ್ಗಾನದಲ್ಲಿ ಇತ್ತೀಚೆಗೆ ಪೌಷ್ಠಿಕ ಆಹಾರ ಮೇಳ ನಡೆಯಿತು. ರೋಟರಿ ಆನ್ಸ್‌ ಕ್ಲಬ್‌ ಅಧ್ಯಕ್ಷೆ ರಮಿತಾ ಶೈಲೇಂದ್ರ ರಾವ್‌ ದೀಪ ಬೆಳಗಿಸಿ ಕಾರ್ಯಕ್ರಮ ಉದ್ಘಾಟಿಸಿದರು. ಮಾನಸ ಅವರು ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿ ಮಾಹಿತಿ ನೀಡಿದರು. ಒಕ್ಕೂಟದ ಅಧ್ಯಕ್ಷೆ ಪವಿತ್ರ ಅಧ್ಯಕ್ಷತೆ ವಹಿಸಿದ್ದರು. ಸಮನ್ವಯಾಧಿಕಾರಿ ಮಲ್ಲಿಕಾ, ಸೇವಾ ಪ್ರತಿನಿಧಿ ಪ್ರಕಾಶ್, ಕೇಂದ್ರದ ಸಂಯೋಜಕಿಯರು, ಜ್ಞಾನವಿಕಾಸ ಕೇಂದ್ರದ ಸದಸ್ಯರು ಉಪಸ್ಥಿತರಿದ್ದರು.































































































error: Content is protected !!
Scroll to Top