ಬೆಂಗಳೂರು, ಆ.25: ಕರ್ನಾಟಕ ಪ್ರದೇಶ ಕಾಂಗ್ರೆಸ್ ಕಮಿಟಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರಿಗೆ ಕೊರೊನಾ ಸೋಂಕು ತಗಲಿದ್ದು, ಅವರು ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ.
ನೆರೆ ಪೀಡಿತ ಪ್ರದೇಶಗಳ ಅವಲೋಕನಕ್ಕಾಗಿ ನಿನ್ನೆ ಬೆಳಗಾವಿ ಮತ್ತು ಬಾಗಲಕೋಟೆಗೆ ತೆರಳಬೇಕಾಗಿದ್ದ ಡಿ.ಕೆ.ಶಿವಕುಮಾರ್ ಆನಾರೋಗ್ಯದ ಕಾರಣ ಈ ಪ್ರವಾಸವನ್ನು ರದ್ದು ಮಾಡಿದ್ದರು. ನಂತರ ಡಿಕೆಶಿ ಕೋವಿಡ್ ಪರೀಕ್ಷೆಗೆ ಒಳಗಾದಾಗ ಕೊರೊನಾ ಪೊಸಿಟಿವ್ ವರದಿ ಬಂದಿದೆ.



























