ಕಾಲು ಜಾರಿ ಕೆರೆಗೆ ಬಿದ್ದು ವ್ಯಕ್ತಿ ಸಾವು

ಕಾರ್ಕಳ : ಬೆಳ್ಮಣ್‌ ಗ್ರಾಮದ ಕುಂಟೊಟ್ಟು ರಾಮ ಶೆಟ್ಟಿ (79) ಎಂಬವರು ಕಾಲು ಜಾರಿ ಕೆರೆಗೆ ಬಿದ್ದು ಮೃತಪಟ್ಟ ಘಟನೆ ನಡೆದಿದೆ. ಮದ್ಯವ್ಯಸನಿಯಾಗಿದ್ದ ರಾಮ ಶೆಟ್ಟಿ ಅವರು ಆ. 22ರಂದು ಕಾಣೆಯಾಗಿದ್ದರು ಎನ್ನಲಾಗುತ್ತಿದೆ. ಆ. 25ರಂದು ಮೃತದೇಹ ಕೆರೆಯಲ್ಲಿ ಪತ್ತೆಯಾಗಿದ್ದು, ಈ ಕುರಿತು ಪ್ರಕರಣ ಕಾರ್ಕಳ ಗ್ರಾಮಾಂತರ ಪೊಲೀಸ್‌ ಠಾಣೆಯಲ್ಲಿ ದಾಖಲಾಗಿದೆ.









error: Content is protected !!
Scroll to Top