ಸಹಿತವಾಗಿರುವುದೇ ಸಾಹಿತ್ಯ- ಎಸ್. ರಾಮ ಭಟ್

ಕಾರ್ಕಳ : ಸಹಿತವಾಗಿರುವುದೇ ಸಾಹಿತ್ಯ. ಶ್ರೇಷ್ಠ ಸಾಹಿತ್ಯವು ಅಂತರಂಗದ ಭಾವನೆಗಳನ್ನು ಹಂಚಿಕೊಳ್ಳುವ ಮೂಲಕ ಉತ್ತಮ ಸಮಾಜವನ್ನು ಸೃಷ್ಟಿ ಮಾಡುವುದು ಎಂದು ಎಸ್. ವಿ. ಟಿ. ವಿದ್ಯಾಸಂಸ್ಥೆಯ ನಿವೃತ್ತ ಕನ್ನಡ ಪ್ರಾಧ್ಯಾಪಕ ಎಸ್. ರಾಮ ಭಟ್ ಅವರು ಅಭಿಪ್ರಾಯಪಟ್ಟರು.

ಅವರು ಅ. 29ರಂದು ಕಾರ್ಕಳದ ಶ್ರೀ ಭುವನೇಂದ್ರ ಪ್ರೌಢಶಾಲೆಯಲ್ಲಿ ಶಿಕ್ಷಕಿ ಸೀಮಾ ಆರ್. ಕಾಮತ್ ಅವರ ಚೊಚ್ಚಲ ಕವನ ಸಂಕಲನ “ಮತ್ತೆ ಹುಟ್ಟುವನು ನೇಸರ” ಕವನ ಸಂಕಲನ ಬಿಡುಗಡೆ ಕಾರ್ಯಕ್ರಮದಲ್ಲಿ ಮಾತನಾಡಿದರು. ಭುವನೇಂದ್ರ ಶಾಲೆಗಳ ಅಧ್ಯಕ್ಷ ವಾಮನ ಕಾಮತ್ ಅವರು ದೀಪ ಬೆಳಗಿಸಿ ಈ ಕಾರ್ಯಕ್ರಮ ಉದ್ಘಾಟಿಸಿದರು. ಲೇಖಕಿ ತಾಯಿ ಉಷಾ ಬಾಳಿಗಾ ಅವರು ಕೃತಿ ಲೋಕಾರ್ಪಣೆಗೊಳಿಸಿದರು. ಶ್ರೀ ಭುವನೇಂದ್ರ ಶಾಲೆಗಳ ಸಂಚಾಲಕ ಎಸ್. ನಿತ್ಯಾನಂದ ಪೈ ಅಧ್ಯಕ್ಷತೆ ವಹಿಸಿದ್ದರು. ನಿವೃತ್ತ ಪ್ರಾಂಶಪಾಲ ಮಿತ್ರಪ್ರಭಾ ಹೆಗ್ಡೆ, ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಕೊಂಡಳ್ಳಿ ಪ್ರಭಾಕರ ಶೆಟ್ಟಿ, ಕ್ಷೇತ್ರ ಶಿಕ್ಷಣಾಧಿಕಾರಿ ಜಿ.ಎಸ್. ಶಶಿಧರ್‌, ನಿವೃತ್ತ ಅಧ್ಯಾಪಕಿ ಶೈಲಜಾ ಹೆಗ್ಡೆ ಶುಭ ಹಾರೈಸಿದರು.

ವಿದ್ಯಾರ್ಥಿನಿ ವೈಷ್ಣವಿ ಕವನ ಸಂಕಲನದ ಕೆಲವು ಹಾಡುಗಳನ್ನು ಸುಶ್ರಾವ್ಯವಾಗಿ ಹಾಡಿದರು. ಶ್ರೀ ಭುವನೇಂದ್ರ ಶಾಲಾ ಮುಖ್ಯ ಶಿಕ್ಷಕಿ ವಿದ್ಯಾ ಕಿಣಿ ಸ್ವಾಗತಿಸಿ, ಸೀಮಾ ಆರ್‌. ಕಾಮತ್‌ ಪ್ರಾಸ್ತವಿಕ ಮಾತುಗಳನ್ನಾಡಿದರು. ರಾಷ್ಟ್ರೀಯ ವ್ಯಕ್ತಿತ್ವ ವಿಕಸನ ತರಬೇತಿದಾರ ರಾಜೇಂದ್ರ ಭಟ್ ಕೆ. ಕಾರ್ಯಕ್ರಮ ನಿರೂಪಿಸಿ, ಪ್ರೌಢಶಾಲಾ ಮುಖ್ಯ ಶಿಕ್ಷಕಿ ವೃಂದಾ ಶೆಣೈ ವಂದಿಸಿದರು.





























































































































































































































error: Content is protected !!
Scroll to Top