ಬೆಂಗಳೂರು, ನ.5 : ಜಿಲ್ಲಾ ಪಂಚಾಯತ್ ಸದಸ್ಯ ಯೋಗೇಶ್ ಗೌಡ ಕೊಲೆ ಪ್ರಕರಣಕ್ಕೆ ಸಂಬಂಧಿಸಿ ಕಾಂಗ್ರೆಸ್ ನಾಯಕ ಮಾಜಿ ಸಚಿವ ವಿನಯ್ ಕುಲಕರ್ಣಿ ಅವರನ್ನು ಸಿಬಿಐ ಗುರುವಾರ ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದೆ.
ಯೋಗಿಶ್ ಗೌಡ ಹತ್ಯಾ ಪ್ರಕರಣಕ್ಕೆ ಸಂಬಂಧಿಸಿದಂತೆ ಧಾರವಾಡದ ಬರಕೊಟ್ರಿಯಲ್ಲಿರುವ ನಿವಾಸದಲ್ಲಿ ವಿನಯ್ ಕುಲಕರ್ಣಿ ಅವರನ್ನು ಸಿಬಿಐ ಅಧಿಕಾರಿಗಳು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.
2016ರ ಜೂನ್ 15ರಂದು 2016ರಲ್ಲಿ ಧಾರವಾಡದ ಸಪ್ತಾಪುರದಲ್ಲಿ ಯೋಗೇಶ್ ಗೌಡ ಮಾಲೀಕತ್ವದ ಜಿಮ್ ಬಳಿ ಯೋಗೇಶ್ ಗೌಡ ಹತ್ಯೆ ನಡೆದಿತ್ತು. ಸೆಪ್ಟೆಂಬರ್ 2019ರಲ್ಲಿ ಸಿಬಿಐ ಹತ್ಯೆ ಪ್ರಕರಣದ ವಿಚಾರಣೆ ಆರಂಭಿಸಿತ್ತು. ಇದೀಗ ವಿನಯ್ ಕುಲಕರ್ಣಿಯವರನ್ನು ವಶಕ್ಕೆ ಪಡೆದಿರುವ ಅಧಿಕಾರಿಗಳು ವಿಚಾರಣೆ ನಡೆಸುತ್ತಿದ್ದಾರೆಂದು ವರದಿಗಳು ತಿಳಿಸಿವೆ.
