ಕಾರ್ಕಳ : ಸ್ಕೂಟರ್ನಲ್ಲಿ ದನದ ಮಾಂಸ ಸಾಗಾಟ ಮಾಡುತ್ತಿದ್ದ ಹಿನ್ನೆಲೆಯಲ್ಲಿ ಕಾರ್ಕಳ ನಗರ ಠಾಣೆ ಪೊಲೀಸರು ಅ. 6ರಂದು ಓರ್ವನನ್ನು ವಶಕ್ಕೆ ಪಡೆದಿದ್ದಾರೆ. ಕಸಬಾ ಗ್ರಾಮದ ಬಂಗ್ಲೆಗುಡ್ಡೆ ಜಂಕ್ಷನ್ ಬಳಿ ಪೊಲೀಸರು ವಾಹನಗಳನ್ನು ತಪಾಸಣೆ ಮಾಡುತ್ತಿದ್ದ ಸಂದರ್ಭ ಬಂಗ್ಲೆಗುಡ್ಡೆ ನಿವಾಸಿ ಮೊಹಮ್ಮದ್ ಯಾಸೀನ್ ಎಂಬಾತನು ಸವಾರಿ ಮಾಡುತ್ತಿದ್ದ ಸ್ಕೂಟರ್ (KA 20EV 6506) ನಿಲ್ಲಿಸಲು ಸೂಚನೆ ನೀಡಿದಾಗ ಪರಾರಿಯಾಗಲು ಯತ್ನಿಸಿದ್ದನು. ಬಳಿಕ ಪೊಲೀಸ್ ಸಿಬ್ಬಂದಿ ಸ್ಕೂಟರ್ ತಡೆದು ನಿಲ್ಲಿಸಿದಾಗ ಅದನ್ನು ಅದರಲ್ಲಿ ದನದ ಮಾಂಸ ಮತ್ತು ದನದ ತಲೆ ಪತ್ತೆಯಾಗಿದೆ.