ಉಡುಪಿ, ಜ.20: ರಸ್ತೆ ಬದಿಯ ಅಂಗಡಿಯ ಮಾಡಿಗೆ ನೇಣು ಹಾಕಿಕೊಂಡು ಯುವಕನೊಬ್ಬ ಆತ್ಮಹತ್ಯೆ ಮಾಡಿಕೊಂಡ ಘಟನೆ ಶಿರ್ವ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಗುರುವಾರ ಸಂಭವಿಸಿದೆ.
ಆತ್ಮಹತ್ಯೆ ಮಾಡಿಕೊಂಡ ಯುವಕನನ್ನು ಮಟ್ಟಾರು ನಿವಾಸಿ ಅಕ್ಷತ್ ಪೂಜಾರಿ (35) ಎಂದು ಗುರುತಿಸಲಾಗಿದೆ. ಕುಡಿತದ ಚಟ ಹೊಂದಿದ್ದ ಈತ ರಸ್ತೆ ಬದಿಯ ಸೈಕಲ್ ಅಂಗಡಿಯ ಮಾಡಿಗೆ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.