ಕಾರ್ಕಳ : ಕಾರ್ಕಳ ವಿಧಾನಸಭಾ ಕ್ಷೇತ್ರದ ಗ್ರಾಮ ಪಂಚಾಯತ್ ಚುನಾವಣೆಯಲ್ಲಿ ಸ್ಪರ್ಧಿಸಿದ ಅಭ್ಯರ್ಥಿಗಳಿಗೆ ಹಾಗೂ ಚುನಾವಣೆಗಾಗಿ ಹಗಲಿರುಳು ದುಡಿದ ಕಾರ್ಯಕರ್ತರಿಗೆ ಜ. 6ರಂದು ಮಂಜುನಾಥ ಪೈ ಸಭಾಂಗಣದಲ್ಲಿ ಬೆಳಿಗ್ಗೆ 9-30 ಕ್ಕೆ ನಡೆಯಲಿದೆ. ಕಾರ್ಯಕ್ರಮದಲ್ಲಿ ಕರ್ನಾಟಕದ ಗಣಿ ಮತ್ತು ಭೂವಿಜ್ಞಾನ ಸಚಿವ ಸಿ.ಸಿ. ಪಾಟೀಲ್, ಕ್ಷೇತ್ರದ ಸಂಸದರು, ಶಾಸಕರು, ಜಿಲ್ಲಾಧ್ಯಕ್ಷರು ಸೇರಿದಂತೆ ಹಲವು ಪ್ರಮುಖರು ಭಾಗವಹಿಸಲಿದ್ದಾರೆ ಎಂದು ಕಾರ್ಕಳ ಬಿಜೆಪಿ ಕ್ಷೇತ್ರಾಧ್ಯಕ್ಷ ಮಹಾವೀರ್ ಹೆಗ್ಡೆ ಪ್ರಕಟನೆಯಲ್ಲಿ ತಿಳಿಸಿದ್ದಾರೆ.
ಜ. 6 : ಬಿಜೆಪಿ ಅಭಿನಂದನಾ ಕಾರ್ಯಕ್ರಮ



























