ಕಾರ್ಕಳ : ಕಾಬೆಟ್ಟು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಜು. 15ರಂದು ವಾತ್ಸಲ್ಯ ಮಕ್ಕಳ ಆರೋಗ್ಯ ತಪಾಸಣಾ ಶಿಬಿರ ನಡೆಯಿತು. ಕಾರ್ಕಳ ಪುರಸಭಾ ಅಧ್ಯಕ್ಷೆ ಸುಮಾ ಕೇಶವ್ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಶಾಸಕ ವಿ. ಸುನಿಲ್ ಕುಮಾರ್, ಗೇರು ಅಭಿವೃದ್ಧಿ ನಿಗಮದ ಅಧ್ಯಕ್ಷ ಮಣಿರಾಜ್ ಶೆಟ್ಟಿ, ತಾಲೂಕು ಆರೋಗ್ಯಾಧಿಕಾರಿ ಡಾ. ಕೃಷ್ಣಾನಂದ ಶೆಟ್ಟಿ, ಜಿಲ್ಲಾ ಪಂಚಾಯತ್ ಮಾಜಿ ಸದಸ್ಯರಾದ ಸುಮಿತ್ ಶೆಟ್ಟಿ, ರೇಷ್ಮಾ ಉದಯ ಶೆಟ್ಟಿ, ನವೀನ್ ಶೆಟ್ಟಿ ಕಾಬೆಟ್ಟು, ಕೆ.ಎಸ್. ಹರೀಶ್ ಶೆಣೈ, ಅಕ್ಷರ ದಾಸೋಹದ ಭಾಸ್ಕರ್ ಶೆಟ್ಟಿ, ಪುರಸಭಾ ಸದಸ್ಯರಾದ ರೆಹಮತ್ ಶೇಖ್, ಪ್ರಭಾ ಮೊದಲಾದವರು ಉಪಸ್ಥಿತರಿದ್ದರು.