ಕಾರ್ಕಳ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಹೊಸ್ಮಾರು ವಲಯ ಇದರ ವತಿಯಿಂದ ಅಲಿಮಾರುಗುಡೆ ಶ್ರೀ ಬ್ರಹ್ಮ ಮೊಗೇರ ದೈವಸ್ಥಾನ ವಠಾರದಲ್ಲಿ ಪೌಷ್ಠಿಕ ಆಹಾರ ಮೇಳ ನಡೆಯಿತು.
ದೈವಸ್ಥಾನ ಜೀರ್ಣೋದ್ಧಾರ ಸಮಿತಿ ನಿಕಟಪೂರ್ವ ಅಧ್ಯಕ್ಷ ಜಗದೀಶ ಅಂಚನ್ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ನಾಟಿ ವೈದ್ಯ ಜಯ ಸುವರ್ಣ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿ, ಮಾಹಿತಿ ನೀಡಿದರು. ಎಸ್ಕೆಡಿಆರ್ಡಿಪಿ ಹೊಸ್ಮಾರು ವಲಯಾಧ್ಯಕ್ಷ ಅಶೋಕ್ ಎಂ.ಕೆ. ಅಧ್ಯಕ್ಷತೆ ವಹಿಸಿದ್ದರು.
ಮೂಡಬಿದ್ರಿ ತಾಲೂಕು ಯೋಜನಾಧಿಕಾರಿ ನಾರಾಯಣ ಶೆಟ್ಟಿ, ಜಾಗೃತಿ ವೇದಿಕೆಯ ವಲಯಾಧ್ಯಕ್ಷ ನಾರಾಯಣ ಪೂಜಾರಿ, ಕೇಂದ್ರ ಒಕ್ಕೂಟದ ಮಾಜಿ ಅಧ್ಯಕ್ಷ ಜಯಕುಮಾರ್ ಜೈನ್, ಬ್ರಹ್ಮ ಮೊಗೇರ ದೈವಸ್ಥಾನದ ಗೌರವಾಧ್ಯಕ್ಷ ಸುಂದರ್ ಬಿ. ವೇದಿಕೆಯಲ್ಲಿ ಉಪಸ್ಥಿತರಿದ್ದರು.
ವಲಯ ಮೇಲ್ವಚಾರಕಿ ಶಾಂತಿ ಸ್ವಾಗತಿಸಿ, ಕಾರ್ಯಕ್ರಮ ನಿರೂಪಿಸಿದರು. ದೀಕ್ಷಾ ವಂದಿಸಿದರು. ತಾಲೂಕು ಜ್ಙಾನವಿಕಾಸ ಸಮನ್ವಯಾಧಿಕಾರಿ ಸರಿತಾ, ಸೇವಾ ಪ್ರತಿನಿಧಿ ಶುಭ ಸಹಕರಿಸಿದರು.