ಬೆಂಗಳೂರು : ಇಂಧನ, ಕನ್ನಡ ಹಾಗೂ ಸಂಸ್ಕೃತಿ ಸಚಿವ ವಿ. ಸುನಿಲ್ ಕುಮಾರ್ ಅವರ ಅಧ್ಯಕ್ಷತೆಯಲ್ಲಿ ಸೆ. 5ರಂದು ಬೆಂಗಳೂರಿನಲ್ಲಿ ಮೆಸ್ಕಾಂ ವ್ಯಾಪ್ತಿಗೆ ಬರುವ ವಿಧಾನಸಭಾ ಕ್ಷೇತ್ರಗಳ ಶಾಸಕರಗಳ ಸಭೆ ನಡೆಯಿತು.
ಸಭೆಯಲ್ಲಿ ಇಂಧನ ಇಲಾಖೆಗೆ ಸಂಬಂಧಪಟ್ಟ ಸಮಸ್ಯೆ ಮತ್ತು ಅದಕ್ಕೆ ಪರಿಹಾರೋಪಾಯದ ಕುರಿತು ಚರ್ಚಿಸಲಾಯಿತು. ಗೃಹ ಸಚಿವ ಅರಗ ಜ್ಞಾನೇಂದ್ರ ಸೇರಿದಂತೆ ಮೆಸ್ಕಾಂ ವ್ಯಾಪ್ತಿಗೆ ಸೇರಿದ ಶಾಸಕರು, ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ ಜಿ. ಕುಮಾರ್ ನಾಯಕ್, ಡಾ. ಎನ್. ಮಂಜುಳಾ, ಇಂಧನ ಇಲಾಖೆಯ ಉನ್ನತ ಅಧಿಕಾರಿಗಳು ಉಪಸ್ಥಿತರಿದ್ದರು.