ಕುಮಾರಸ್ವಾಮಿ ಹಾಗೂ ಸಿದ್ದರಾಮಯ್ಯ ಭ್ರಮೆಯಲ್ಲಿದ್ದಾರೆ: ಬಿ.ಎಸ್. ಯಡಿಯೂರಪ್ಪ ಚಾಟಿ

ವಿಜಯಪುರ: ಮಾಜಿ ಮುಖ್ಯಮಂತ್ರಿಗಳಾದ ಎಚ್. ಡಿ. ಕುಮಾರಸ್ವಾಮಿ ಮತ್ತು ಸಿದ್ಧರಾಮಯ್ಯ ಭ್ರಮೆಯಲ್ಲಿ ಇದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ಕಿಡಿ ಕಾರಿದ್ದಾರೆ. ವಿಜಯಪುರ ಜಿಲ್ಲೆಯ ಸಿಂದಗಿ ತಾಲೂಕಿನ ಮೊರಟಗಿಯಲ್ಲಿ ಅವರು ಬಿಜೆಪಿ ಅಭ್ಯರ್ಥಿ ರಮೇಶ ಭೂಸನೂರ ಪರ ಪ್ರಚಾರಕ್ಕೆ ಆಗಮಿಸಿದರು.
ಈ ಸಂದರ್ಭದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಮಾಜಿ ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ಅವರು, ಆರ್ ಎಸ್ ಎಸ್ ಕುರಿತು ಮಾಜಿ ಮುಖ್ಯಮಂತ್ರಿ ಎಚ್. ಡಿ. ಕುಮಾರಸ್ವಾಮಿ ಮತ್ತು ಎಸ್. ಸಿದ್ಧರಾಮಯ್ಯ ನೀಡಿದ ಹೇಳಿಕೆಗಳ ವಿರುದ್ಧ ವಾಗ್ದಾಳಿ ನಡೆಸಿದರು.
ಇಬ್ಬರೂ ಮಾಜಿ ಮುಖ್ಯಮಂತ್ರಿಗಳು. ಅವರ ಖುಷಿ ಬಂದಂಗೆ ಮಾತನಾಡಲಿ. ಆದ್ರೆ, ಅನಗತ್ಯವಾಗಿ ಆರ್‌ಎಸ್ಎಸ್ ಹೆಸರು ಪ್ರಸ್ತಾಪ ಮಾಡುತ್ತಿದ್ದಾರೆ ಎಂದು ಯಡಿಯೂರಪ್ಪ ಅವರು ಟೀಕಿಸಿದರು.
ಆರ್‌ಎಸ್ಎಸ್ ಹೆಸರು ಬಳಸುವ ಅಗತ್ಯ ಇಲ್ಲ. ಏನೋ ಸಾಧನೆ ಮಾಡಿರುವ ಹಾಗೇ ಎಚ್. ಡಿ. ಕುಮಾರಸ್ವಾಮಿ ಮತ್ತು ಎಸ್. ಸಿದ್ದರಾಮಯ್ಯ ಭ್ರಮೆಯಲ್ಲಿ ಇದ್ದಾರೆ. ಇದರಿಂದ ಅವರಿಗೇನೂ ಲಾಭ ಇಲ್ಲ ಎಂದು ಬಿಎಸ್‌ವೈ ಅವರು ಹೇಳಿದರು.
ಎಚ್. ಡಿ. ಕುಮಾರಸ್ವಾಮಿ ಯಾವಾಗ ಏನು ಮಾತನಾಡುತ್ತಾರೆ ಎಂಬುದರ ಕುರಿತು ಅವರಿಗೇ ಗೊತ್ತಿರಲ್ಲ. ಆದರೆ, ಮತದಾರರಿಗೆ ಯಾವುದು ಸತ್ಯ ಎಂಬುದು ಗೊತ್ತಿದೆ. ಈ ಬಾರಿ ಚುನಾವಣೆಯಲ್ಲಿ ಮತದಾರರು ತಕ್ಕ ಉತ್ತರ ನೀಡುತ್ತಾರೆ ಎಂದು ಯಡಿಯೂರಪ್ಪ ಅವರು ಹೇಳಿದರು‌.









































































































































































error: Content is protected !!
Scroll to Top