ಕಾರ್ಕಳ : ತೆಂಗಿನಮರದಿಂದ ಬಿದ್ದು ವ್ಯಕ್ತಿ ಸಾವು

ಕಾರ್ಕಳ : ತೆಂಗಿನ ಕಾಯಿ ಕೀಳಲು ತೆಂಗಿನ‌ ಮರ ಏರಿದ ವ್ಯಕ್ತಿಯೋರ್ವರು ಮೃತಪಟ್ಟ ಘಟನೆ ತಾಲೂಕಿನ ಪಳ್ಳಿ ಗ್ರಾಮದ ಮಹಾಕಾಳಿ ಮಠದಲ್ಲಿ ಸಂಭವಿಸಿದೆ.

ಮಹಾಕಾಳಿಮಠ ನಿವಾಸಿ ನಿತ್ಯಾನಂದ ಪ್ರಭು (41 ವ.) ಎಂಬವರೇ ಮೃತಪಟ್ಟ ದುರ್ದೈವಿ.ಇವರು ತಮ್ಮ ಮನೆಯ ಸಮೀಪದ ತೆಂಗಿನ ಮರಕ್ಕೆ ತೆಂಗಿನಕಾಯಿ ಕೀಳಲು ಹತ್ತಿದವರು ಆಕಸ್ಮಿಕವಾಗಿ ಕಾಲು ಜಾರಿ ಬಿದ್ದು ಗಂಭೀರ ಗಾಯಗೊಂಡವರನ್ನು ಮಣಿಪಾಲ ಕೆ.ಎಂ.ಸಿ ಆಸ್ಪತ್ರೆಗೆ ದಾಖಲಿಸಲಾಗಿತ್ತು.

ಅಲ್ಲಿ ಖರ್ಚು ಜಾಸ್ತಿಯಾಗುತ್ತದೆ ಎಂದು ಮಣಿಪಾಲ್ ಆಸ್ಪತ್ರೆಯಿಂದ ಡಿಸ್ಚಾರ್ಜ್ ಮಾಡಿ ಕಾರ್ಕಳ ಸರಕಾರಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅಲ್ಲಿ ಚಿಕಿತ್ಸೆಗೆ ಸ್ಪಂದಿಸದೇ ಮೃತಪಟ್ಟರು ಎನ್ನಲಾಗಿದೆ.

ಈ ಕುರಿತು ಮೃತರ ಸಹೋದರ ದಯಾನಂದ ಪ್ರಭು ಅವರು ಕಾರ್ಕಳ ನಗರ ಠಾಣೆಯಲ್ಲಿ ದೂರು ನೀಡಿದ್ದಾರೆ.





























































































































































































































error: Content is protected !!
Scroll to Top