ಡಿ.3 : ಕಾರ್ಕಳ ಹಾಗೂ ಹೆಬ್ರಿ ಪ್ರವಾಸಿ ಮಂದಿರದಲ್ಲಿ ಭ್ರಷ್ಟಾಚಾರ ನಿಗ್ರಹದಳದಿಂದ ಅಹವಾಲು ಸ್ವೀಕಾರ

ಕಾರ್ಕಳ : ಉಡುಪಿ ಜಿಲ್ಲಾ ಭ್ರಷ್ಟಾಚಾರ ನಿಗ್ರಹ ದಳ ಪೊಲೀಸ್ ಠಾಣೆಯ ಅಧಿಕಾರಿ ಸಿಬ್ಬಂದಿಯವರು ಡಿ.3ರಂದು ಬೆಳಗ್ಗೆ 11ರಿಂದ ಮಧ್ಯಾಹ್ನ 1 ಗಂಟೆಯವರೆಗೆ ಕಾರ್ಕಳ ಪ್ರವಾಸಿ ಮಂದಿರ ಹಾಗೂ ಮಧ್ಯಾಹ್ನ 2ರಿಂದ ಸಂಜೆ 4ಗಂಟೆಯರವರೆಗೆ ಹೆಬ್ರಿ ಪ್ರವಾಸಿ ಮಂದಿರದಲ್ಲಿ ಸಾರ್ವಜನಿಕರಿಂದ ಅಹವಾಲುಗಳನ್ನು ಸ್ವೀಕರಿಸಲಿದ್ದಾರೆ.

ಸಾರ್ವಜನಿಕ ನೌಕರ ತನ್ನ ದಿನನಿತ್ಯದ ಕೆಲಸಗಳನ್ನು ನಿರ್ವಹಿಸಲು ಅನಗತ್ಯ ವಿಳಂಬ ಮಾಡಿದ್ದಲ್ಲಿ, ನಿರ್ಲಕ್ಷ್ಯತೆ ತೋರಿದ್ದಲ್ಲಿ ಅಥವಾ ಲಂಚ ಕೇಳಿದ ಪ್ರಕರಣಗಳ ಕುರಿತು ದೂರು ಸ್ವೀಕರಿಸಲಾಗುವುದು ಎಂದು ಭ್ರಷ್ಟಾಚಾರ ನಿಗ್ರಹ ದಳದ ಆರಕ್ಷಕ ನಿರೀಕ್ಷಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.



































































































error: Content is protected !!
Scroll to Top