ಗೋಹತ್ಯಾ ನಿಷೇಧ ಕಾನೂನು ಕಟ್ಟುನಿಟ್ಟಾಗಿ ಜಾರಿಯಾಗಬೇಕು – ಪೊಲೀಸರಿಗೆ ಖಡಕ್ ವಾರ್ನಿಂಗ್ ಕೊಟ್ಟ ಗೃಹ ಸಚಿವ ಆರಗ ಜ್ಞಾನೇಂದ್ರ

ಶಿವಮೊಗ್ಗ: ಗೋ ಕಳ್ಳರ ಹಾವಳಿ ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, ಸರ್ಕಾರಕ್ಕೆ ಬಿಸಿ ತುಪ್ಪವಾಗಿ ಪರಿಣಮಿಸಿದೆ. ತೀರ್ಥ ಹಳ್ಳಿಯಲ್ಲಿ ಗೋ ಕಳ್ಳರು ಯುವಕರ ಮೇಲೆ ಮಾರಣಾಂತಿಕ ದಾಳಿ ಮಾಡಿದ ಬೆನ್ನಲ್ಲೇ, ಹಿಂದೂ ಪರ ಸಂಘಟನೆಗಳು ಬಿಜೆಪಿ ನಾಯಕರು ಅದರಲ್ಲೂ ಗೃಹ ಸಚಿವ ಆರಗ ಜ್ಞಾನೇಂದ್ರ ವಿರುದ್ಧವೇ ತಿರುಗಿ ಬಿದ್ದಿದ್ದವು. ಈ ಹಿನ್ನೆಲೆಯಲ್ಲಿ ಈ ಕುರಿತು ಶಿವಮೊಗ್ಗದಲ್ಲಿ ಪ್ರತಿಕ್ರಿಯೆ ನೀಡಿದ ಗೃಹ ಸಚಿವ ಆರಗ ಜ್ಞಾನೇಂದ್ರ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಜಾನುವಾರ ಕಳ್ಳ ಸಾಗಣೆ ತಡೆ ವಿಶೇಷ ಕಾನೂನನ್ನ ನಮ್ಮ ಸರ್ಕಾರ ಜಾರಿಗೆ ತಂದಿದೆ. ಆದರೂ ಸಹ ಅಲ್ಲಲ್ಲಿ ಜಾನುವಾರುಗಳನ್ನು ಕಳ್ಳ ಸಾಗಣೆ ಮಾಡೋದು, ಕಡಿದು ಮಾರುವುದು ನಡೀತಾನೇ ಇದೆ. ತೀರ್ಥಹಳ್ಳಿಯಲ್ಲಿ ಗೋ ಕಳ್ಳ ಸಾಗಣೆ ತಡೆಯಲು ಎರಡು ಮೂರು ಯುವಕರು ಪ್ರಯತ್ನಿಸಿದ್ದಾರೆ. ಅವರ ಬೈಕ್‌ಗೆ ಡಿಕ್ಕಿ ಹೊಡಿಸಿ ಸಾಯಿಸುವ ಪ್ರಯತ್ನವನ್ನ ಗೋ ಕಳ್ಳರು ಮಾಡಿದ್ದಾರೆ. ವಿಷಯ ತಿಳಿದ ತಕ್ಷಣ ಪೊಲೀಸರು ಹೋಗಿ ನಿರ್ಬಂಧ ಮಾಡಿದ್ದಾರೆ. ಕಾನೂನು ಕ್ರಮ ಜರುಗಿಸಿದ್ದಾರೆ. ಸಾವು ಬದುಕಿನ ಹೋರಾಟ ನಡೆಸುತ್ತಿದ್ದವರನ್ನ ನಾವೂ ತೀರ್ಥಹಳ್ಳಿ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ನೀಡಿ ಮಣಿಪಾಲ್‌ಗೆ ಕಳುಹಿಸಿ ಕೊಟ್ಟಿದ್ದೇವೆ. ಬುಧವಾರ ಮುಂಜಾನೆಯೂ ಸಹ ಮಣಿಪಾಲ ಆಸ್ಪತ್ರೆಗೆ ಭೇಟಿ ನೀಡಿ ಯುವಕರ ಆರೋಗ್ಯದ ಬಗ್ಗೆ ವಿಚಾರಿಸಿಕೊಂಡು ಬಂದಿದ್ದೇನೆ. ಸದ್ಯ ಯುವಕರ ಜೀವಕ್ಕೇನೂ ಅಪಾಯವಿಲ್ಲ ಎಂದು ಗೃಹ ಸಚಿವರು ವಿವರಿಸಿದರು.

ಶಿವಮೊಗ್ಗ ಜಿಲ್ಲೆಯಲ್ಲಿ ಗೋ ಕಳ್ಳ ಸಾಗಣೆಯನ್ನ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ನಿಯಂತ್ರಣಕ್ಕೆ ತಂದಿದ್ದಾರೆ. ಗೋವಧೆ ಸ್ಥಳಗಳ ಮೇಲೆ ದಾಳಿ ನಡೆಸಿದ್ದಾರೆ. ಎಲ್ಲಾ ಕಡೆ ಗೋ ಸಾಗಾಣಿಕ ಅಕ್ರಮ ನಡೆಯುತ್ತಿರುವುದು ನಿಜ. ಕೆಲವೆಡೆ ಪೊಲೀಸರು ಬಿಗಿ ಕ್ರಮ ಕೈಗೊಳ್ಳುತ್ತಿಲ್ಲ. ಗೋ ವಧೆ ನಿರತರ ಜೊತೆಗೆ ಶಾಮೀಲಾಗಿಯೂ ಸಹ ಕೆಲಸ ಮಾಡುತ್ತಿದ್ದಾರೆ. ಯಾರು ಸಾಗಣೆ ಮಾಡಿಯೇ ಬದುಕಬೇಕು ಎಂದು ಅಂದುಕೊಂಡಿದ್ದಾರೋ ಅವರನ್ನ ಸುಮ್ಮನೇ ಬಿಡೋದಿಲ್ಲ ಎಂದು ಗೃಹ ಸಚಿವರು ಆಕ್ರೋಶ ವ್ಯಕ್ತಪಡಿಸಿದರು.

ಈ ಕುರಿತಾಗಿ ಕೋರ್ಟ್ ಆದೇಶವೂ ಇದೆ, ಬಿಗಿಯಾದ ಕಾನೂನನ್ನೂ ಮಾಡಿಕೊಟ್ಟಿದ್ದೇವೆ. ಹಾಗೇನಾದರೂ ಮುಲಾಜು ನೋಡುತ್ತಾರೆ ಎಂದರೆ ಆಯಾ ಠಾಣೆಯ ಪೊಲೀಸರ ಮೇಲೆ ಕ್ರಮ ಜರುಗಿಸುತ್ತೇವೆ. ತೀರ್ಥಹಳ್ಳಿಯಲ್ಲಿ ಗೋ ಕಳ್ಳರ ವಿರುದ್ಧ ಪ್ರತಿಭಟನೆಯಾಗಿದ್ದು ಜನರ ಸಹಜ ಪ್ರತಿಕ್ರಿಯೆ. ನಮ್ಮ ಗೋವುಗಳ ಸಂಖ್ಯೆಯೂ ಸಹ ಗಣನೀಯ ಪ್ರಮಾಣದಲ್ಲಿ ಕಡಿಮೆಯಾಗುತ್ತಿವೆ ಎಂದು ಆರಗ ಜ್ಞಾನೇಂದ್ರ ಹೇಳಿದರು.





























































































































































































































error: Content is protected !!
Scroll to Top