ಪೆರ್ವಾಜೆ : ಜಿಲ್ಲಾ ಉಪನಿರ್ದೇಶಕ ಮಲ್ಲೆಸ್ವಾಮಿ ಅವರಿಗೆ ಸನ್ಮಾನ

ಕಾರ್ಕಳ : ಸುಂದರ ಪುರಾಣಿಕ ಸರಕಾರಿ ಪ್ರೌಢಶಾಲೆ ಪೆರ್ವಾಜೆಯಲ್ಲಿ ಕಾರ್ಕಳ ತಾಲೂಕು ಮುಖ್ಯ ಶಿಕ್ಷಕರ ಸಂಘದ ವತಿಯಿಂದ ಉಡುಪಿ ಜಿಲ್ಲಾ ಉಪನಿರ್ದೇಶಕ ಮಲ್ಲೆಸ್ವಾಮಿ ಅವರನ್ನು ಜ. 12ರಂದು ಸನ್ಮಾನಿಸಲಾಯಿತು. ಕ್ಷೇತ್ರ ಶಿಕ್ಷಣಾಧಿಕಾರಿ ವೆಂಕಟೇಶ್ ನಾಯಕ್ ಸನ್ಮಾನಿಸಿದರು. ಮುಖ್ಯ ಶಿಕ್ಷಕರ ಸಂಘ ದ ತಾಲೂಕು ಅಧ್ಯಕ್ಷ ಪ್ರಕಾಶ್ ರಾವ್ ಇನ್ನಾ , ಕೋಶಾಧಿಕಾರಿ ಸಂಜೀವ ಪೂಜಾರಿ, ತಾಲೂಕಿನ 56 ಪ್ರೌಢಶಾಲೆಗಳ ಮುಖ್ಯಶಿಕ್ಷಕರು ಪಾಲ್ಗೊಂಡರು. ಸುಂದರ ಪುರಾಣಿಕ ಪ್ರೌಢಶಾಲೆಯ ಮುಖ್ಯಶಿಕ್ಷಕಿ ಹರ್ಷಿಣಿ ಕೆ. ಸ್ವಾಗತಿಸಿ, ಶಿಕ್ಷಣ ಸಂಯೋಜಕರಾದ ಪ್ರಕಾಶ್‌ ನಿರೂಪಿಸಿ, ಬಾಲಕೃಷ್ಣ ನಾಯಕ್ ವಂದಿಸಿದರು.









































































































error: Content is protected !!
Scroll to Top