ಬೆಂಗಳೂರು: ದ್ವಿಪಥವಿರುವ ಶಿರಾಡಿ ಘಾಟ್ ರಸ್ತೆಯನ್ನು ಚತುಷ್ಪಥ ರಸ್ತೆಯನ್ನಾಗಿ 1200 ಕೋಟಿ ರೂ.ಗಳ ವೆಚ್ಚದಲ್ಲಿ ನಿರ್ಮಿಸಲು ಕೇಂದ್ರ ರಾಷ್ಟ್ರೀಯ ಹೆದ್ದಾರಿ ಮತ್ತು ರಸ್ತೆ ಸಾರಿಗೆ ಸಚಿವ ನಿತಿನ್ ಗಡ್ಕರಿ ಅನುಮೋದನೆ ನೀಡಿದ್ದಾರೆ.
ಮಳೆಗಾಲದ ಸಮಯದಲ್ಲಿ ಈ ರಸ್ತೆಯಲ್ಲಿ ಸಂಚಾರ ಬಹು ಕಠಿಣವಾಗಿರುತ್ತದೆ ಆದ್ದರಿಂದ ಶಿರಾಡಿ ಘಾಟ್ ಹೆದ್ದಾರಿಯನ್ನು ತಕ್ಷಣ ಮೇಲ್ದರ್ಜೆಗೇರಿಸಬೇಕಾಗಿದೆ ಅದಕ್ಕಾಗಿ ಎನ್.ಹೆಚ್.ಎ.ಐ ವತಿಯಿಂದ ಕಾಮಗಾರಿಯನ್ನು ಕೈಗೆತ್ತಿಕೊಂಡು 2 ವರ್ಷಗಳ ಅವಧಿಯಲ್ಲಿ ಪೂರ್ಣಗೊಳಿಸುವುದಾಗಿ ಅವರು ತಿಳಿಸಿದ್ದಾರೆ. ಈ ದ್ವಿಪಥ ರಸ್ತೆಯನ್ನು ಚತುಷ್ಪಥ ರಸ್ತೆಯನ್ನಾಗಿ ಮಾಡಲು ಕೇಂದ್ರ ಸರ್ಕಾರ ಒಪ್ಪಿಗೆ ಸೂಚಿಸಿದೆ ಮತ್ತು ರಾಜ್ಯ ಸರ್ಕಾರದಿಂದ ಅಗತ್ಯವಿರುವ ಎಲ್ಲಾ ಸಹಕಾರ ಹಾಗೂ ಅನುಮೋದನೆಗಳನ್ನು ನೀಡುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಭರವಸೆ ನೀಡಿದ್ದಾರೆ.
ಬೆಂಗಳೂರು ಮತ್ತು ಮಂಗಳೂರಿನ ಸಂಪೂರ್ಣ ಮಾರ್ಗ ಏಕರೀತಿಯ ಚತುಷ್ಪಥ ರಸ್ತೆಯಾಗಲಿದ್ದು, ಪರಿಸರ ಹಾಗೂ ಆರ್ಥಿಕ ದೃಷ್ಟಿಯಿಂದ ಸುಸ್ಥಿರ ರೀತಿಯಲ್ಲಿ ಎನ್.ಹೆಚ್ 75 ನ್ನು ಚತುಷ್ಪಥವಾಗಿಸುವ ಮೂಲಕ ಅತ್ಯಂತ ವೇಗವಾಗಿ ಅಭಿವೃದ್ಧಿಗೊಳಿಸಬಹುದಾಗಿದೆ.
ಶಿರಾಡಿ ಘಾಟ್ ರಸ್ತೆಯನ್ನು ಚತುಷ್ಪಥ ರಸ್ತೆಯನ್ನಾಗಿಸಲು ಅನುಮೋದನೆ : ಸಚಿವ ನಿತಿನ್ ಗಡ್ಕರಿ
Recent Comments
ಕಗ್ಗದ ಸಂದೇಶ
on