ನವದೆಹಲಿ: ಜಮ್ಮು ಮತ್ತು ಕಾಶ್ಮೀರದಲ್ಲಿ ಆರ್ಟಿಕಲ್ 370 ರದ್ದಾದ ನಂತರ ಬರೋಬ್ಬರಿ 439 ಭಯೋತ್ಪಾದಕರ ಹತ್ಯೆ ಮಾಡಲಾಗಿದೆ ಎಂದು ರಾಜ್ಯಸಭೆಯಲ್ಲಿ ಗೃಹ ಖಾತೆ ರಾಜ್ಯ ಸಚಿವ ನಿತ್ಯಾನಂದ ರಾಯ್ ಹೇಳಿದ್ದಾರೆ.
ಇದೇ ವೇಳೆ ಭಯೋತ್ಪಾದಕರ ಸಂಚಿನಿಂದಾಗಿ 98 ನಾಗರಿಕರು ಸಾವಿಗೀಡಾಗಿದ್ದಾರೆ ಎಂದ ಸಚಿವ ನಿತ್ಯಾನಂದ ರಾಯ್, ಉಗ್ರರು ನಡೆಸಿದ ದಾಳಿಯಲ್ಲಿ 109 ಭದ್ರತಾ ಸಿಬ್ಬಂದಿ ಕೂಡ ಹುತಾತ್ಮರಾಗಿದ್ದಾರೆ. ಒಟ್ಟಾರೆ ಜಮ್ಮು ಮತ್ತು ಕಾಶ್ಮೀರದಲ್ಲಿ 541 ಭಯೋತ್ಪಾದಕ ಘಟನೆಗಳು ನಡೆದಿವೆ ಎಂದು ರಾಜ್ಯಸಭೆಗೆ ತಿಳಿಸಿದರು.
ಸಾರ್ವಜನಿಕ ಆಸ್ತಿಗೆ ಹಾನಿಯಾಗಿಲ್ಲ
ಈ ಘಟನೆಗಳಲ್ಲಿ ಯಾವುದೇ ಗಮನಾರ್ಹ ಸಾರ್ವಜನಿಕ ಆಸ್ತಿಗೆ ಹಾನಿಯಾಗಿಲ್ಲ, ಆದರೆ ವೈಯಕ್ತಿಕ ಆಸ್ತಿ ಅಂದಾಜು 5.3 ಕೋಟಿ ರೂ. ನಷ್ಟವಾಗಿದೆ ಎಂದು ಅವರು ಹೇಳಿದರು.
ಸಂಸತ್ತಿನ ಬಜೆಟ್ ಅಧಿವೇಶನವು ಜನವರಿ 31 ರಂದು ರಾಷ್ಟ್ರಪತಿ ರಾಮ್ ನಾಥ್ ಕೋವಿಂದ್ ಅವರ ಭಾಷಣದೊಂದಿಗೆ ಪ್ರಾರಂಭವಾಯಿತು. ಬಜೆಟ್ ಅಧಿವೇಶನದ ಮೊದಲ ಭಾಗ ಜನವರಿ 31 ರಿಂದ ಫೆಬ್ರವರಿ 11 ರವರೆಗೆ ಮತ್ತು ಎರಡನೇ ಭಾಗ ಮಾರ್ಚ್ 14 ರಿಂದ ಏಪ್ರಿಲ್ 8 ರವರೆಗೆ ನಡೆಯಲಿದೆ.
ಆರ್ಟಿಕಲ್ 370 ರದ್ದಾದ ಮೇಲೆ 439 ಉಗ್ರರ ಹತ್ಯೆ: ನಿತ್ಯಾನಂದ ರಾಯ್
Recent Comments
ಕಗ್ಗದ ಸಂದೇಶ
on