ಶ್ರೀನಗರ: ಶ್ರೀನಗರದ ಜಕುರಾ ಪ್ರದೇಶದಲ್ಲಿ ಶನಿವಾರ ಬೆಳಗ್ಗೆ ಭಾರತೀಯ ಸೇನಾಪಡೆ ಎನ್ಕೌಂಟರ್ ನಡೆಸಿದ್ದು, ಲಷ್ಕರ್ ಇ ತೋಯ್ಬಾದ ಮತ್ತೊಂದು ಅಂಗವಾದ ಟಿಆರ್ಎಫ್ನ ಇಬ್ಬರು ಉಗ್ರರನ್ನು ಹೊಡೆದುರುಳಿಸಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
ಹತ್ಯೆಗೀಡಾದ ಭಯೋತ್ಪಾದಕರಲ್ಲಿ ಒಬ್ಬನನ್ನು ಇಖ್ಲಾಕ್ ಹಜಂ ಎಂದು ಗುರುತಿಸಲಾಗಿದ್ದು, ಇತ್ತೀಚೆಗೆ ಅನಂತ್ನಾಗ್ನ ಹಸನ್ಪೋರಾದಲ್ಲಿ ನಡೆದ ಹೆಡ್ಕಾನ್ಸ್ಟೇಬಲ್ ಅಲಿ ಮೊಹಮ್ಮದ್ ಹತ್ಯೆಯಲ್ಲಿ ಇಖ್ಲಾಕ್ ಭಾಗಿಯಾಗಿದ್ದನು ಎಂದು ತಿಳಿಸಿದ್ದಾರೆ.
ಕಾರ್ಯಾಚರಣೆಯ ಸ್ಥಳದಿಂದ ಎರಡು ಪಿಸ್ತೂಲ್ಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಕಾಶ್ಮೀರ ಪೊಲೀಸರು ಮಾಹಿತಿ ನೀಡಿದ್ದಾರೆ.