ಹೆಬ್ರಿ : ಕಾಂಗ್ರೆಸ್ ಸದಸ್ಯತ್ವ ನೋಂದಣಿ ಅಭಿಯಾನ

ಹೆಬ್ರಿ : ಜನಸಾಮಾನ್ಯರ ಪಕ್ಷವಾಗಿರುವ ಕಾಂಗ್ರೆಸ್ ನ ಸದಸ್ಯತ್ವ ಅಭಿಯಾನದ ಕಾರ್ಯಕ್ಕೆ ಎಲ್ಲರೂ ಕೈಜೋಡುವಂತೆ ಹೆಬ್ರಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮುದ್ರಾಡಿ ಮಂಜುನಾಥ ಪೂಜಾರಿ ಮನವಿ ಮಾಡಿಕೊಂಡರು.
ಅವರು ಫೆ. 9ರಂದು ಹೆಬ್ರಿಯ ಚೈತನ್ಯ ಯುವ ವೃಂದ ಒಳಾಂಗಣ ಕ್ರೀಡಾಂಗಣದಲ್ಲಿ ಕಾಂಗ್ರೆಸ್‌ ಪಕ್ಷದ ಸದಸ್ಯತ್ವ ನೋಂದಣಿ ಡಿಜಿಟಲ್ ಅಭಿಯಾನದಲ್ಲಿ ಮಾತನಾಡಿದರು.
ಪಕ್ಷದ ಹೆಬ್ರಿ ಉಸ್ತುವಾರಿ ಅಶ್ವಿನ್ ಕುಮಾರ್ ರೈ ಮತ್ತು ಸುರೇಂದ್ರ ಶೆಟ್ಟಿ ಕಾಂಗ್ರೆಸ್ ಸದಸ್ಯತ್ವ ಅಭಿಯಾನದ ಕುರಿತು ಮಾತನಾಡಿದರು.
ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷ ನೀರೆ ಕೃಷ್ಣ ಶೆಟ್ಟಿ, ಜಿಲ್ಲಾ ಕಾಂಗ್ರೆಸ್‌ ಸದಸ್ಯ ಸೀತಾನದಿ ರಮೇಶ ಹೆಗ್ಡೆ, ಜಿಲ್ಲಾ ಕಿಸಾನ್ ಕಾಂಗ್ರೆಸ್ ಕಾರ್ಯಾಧ್ಯಕ್ಷ ಕೆರ್ವಾಶೆ ಪ್ರಕಾಶ ಪೂಜಾರಿ, ಯುವ ಕಾಂಗ್ರೆಸ್ ಅಧ್ಯಕ್ಷ ದಿನೇಶ ಶೆಟ್ಟಿ, ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ರಂಜನಿ ಹೆಬ್ಬಾರ್ ಕಬ್ಬಿನಾಲೆ, ಪಕ್ಷದ ವಿವಿಧ ಘಟಕಗಳ ಮುಖ‌ಂಡರು ಭಾಗವಹಿಸಿದ್ದರು. ಬ್ಲಾಕ್ ಕಾಂಗ್ರೆಸ್ ಕಾರ್ಯದರ್ಶಿ ಎಚ್. ಜನಾರ್ಧನ್ ಕಾರ್ಯಕ್ರಮ ನಿರ್ವಹಿಸಿದರು.





























































































































































































































error: Content is protected !!
Scroll to Top