ಕಾರ್ಕಳ : ದುರ್ಗಾ ಗ್ರಾಮದ ತೆಳ್ಳಾರು ನಿವಾಸಿ ಚಿದಾನಂದ ಭಟ್ (42) ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಫೆ. 12ರಂದು ನಡೆದಿದೆ. ಅವಿವಾಹಿತರಾಗಿದ್ದ ಇವರು ಕೃಷಿ ಕಾರ್ಯ ನಡೆಸಿಕೊಂಡಿದ್ದರು. ಮದ್ಯಪಾನ ವ್ಯಸನಿಯಾಗಿದ್ದ ಇವರು ಈ ಹಿಂದೆಯೂ ಆತ್ಮಹತ್ಯೆಗೆ ಯತ್ನಿಸಿದ್ದರು ಎನ್ನಲಾಗಿದೆ. ಕಾರ್ಕಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.