ಬಿಜೆಪಿ ಕ್ಷೇತ್ರಾಧ್ಯಕ್ಷರ ಹೇಳಿಕೆ ಖಂಡನೀಯ – ಸದಾಶಿವ ದೇವಾಡಿಗ

ಕಾರ್ಕಳ : ಸಮಸ್ತ ಭಾರತೀಯರ ಆರಾಧ್ಯ ಮೂರ್ತಿ ಬಾಹುಬಲಿ ಸ್ವಾಮಿಯ ಬಗ್ಗೆ ಯಾವನೋ ಒಬ್ಬ ತಿಳಿಗೇಡಿಯ ಅವಹೇಳನಕಾರಿ ಹೇಳಿಕೆಯನ್ನು ಕಾರ್ಕಳ ಬಿಜೆಪಿ ಕ್ಷೇತ್ರಾಧ್ಯಕ್ಷರು ಇದು ಭಾರತೀಯ ರಾಷ್ಟ್ರೀಯ ಕಾಂಗ್ರೇಸ್ ಪಕ್ಷದ ಮುಖಂಡನ ಹೇಳಿಕೆ ಎಂದು ತಿರುಚಿ ಸಮಾಜವನ್ನು ದಿಕ್ಕು ತಪ್ಪಿಸುತ್ತಿರುವುದು ಖಂಡನೀಯ. ಇದು ಆ ಪಕ್ಷದ ರಾಜಕೀಯ ದಿವಾಳಿತನಕ್ಕೆ ಸಾಕ್ಷಿಯಾಗಿದೆ ಎಂದು ಕಾರ್ಕಳ ಬ್ಲಾಕ್ ಕಾಂಗ್ರೇಸ್ ಅಧ್ಯಕ್ಷ ಕೆ. ಸದಾಶಿವ ದೇವಾಡಿಗ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಬಾಹುಬಲಿ ಸ್ವಾಮಿಯ ಬಗ್ಗೆ ಕೀಳು ಅಭಿರುಚಿಯ ಹೇಳಿಕೆ ನೀಡಿರುವ ಆಯೂಬ್ ಖಾನ್ ಎಂಬವನಿಗೂ ಮತ್ತು ಆತನ ನ್ಯೂ ಕಾಂಗ್ರೆಸ್ ಪಕ್ಷಕ್ಕೂ, ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಪಕ್ಷಕ್ಕೂ ಯಾವುದೇ ಸಂಬಂಧವಿರುವುದಿಲ್ಲ. ವಸ್ತುಸ್ಥಿತಿಯ ಅರಿವಿದ್ದರೂ ಕಾರ್ಕಳ ಬಿಜೆಪಿ ಕ್ಷೇತ್ರಾಧ್ಯಕ್ಷರು ದುರುದ್ದೇಶ ಪೂರ್ವಕವಾಗಿ ಇದನ್ನು ತನ್ನ ರಾಜಕೀಯ ಲಾಭಕ್ಕಾಗಿ ಬಳಸಿಕೊಳ್ಳುವ ಹುನ್ನಾರ ಮಾಡುತ್ತಿರುವುದು ವಿಷಾದನೀಯ.

ಬಾಹುಬಲಿಯ ಬಗ್ಗೆ ಆಯೂಬ್ ಖಾನ್ ನೀಡಿರುವ ಧರ್ಮವಿರೋಧಿ ಹೇಳಿಕೆಯನ್ನು ಕಾಂಗ್ರೆಸ್ ಖಂಡಿಸುತ್ತದೆ. ಅವನ ವಿರುದ್ಧ ಸೂಕ್ತ ಕಾನೂನಾತ್ಮಕ ಕ್ರಮ ಕೈಗೊಳ್ಳುವಂತೆ ಸರಕಾರವನ್ನು ಒತ್ತಾಯಿಸುತ್ತದೆ ಎಂದು ಅವರು ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಕಾರ್ಕಳ ಬಿಜೆಪಿ ಕ್ಷೇತ್ರಾಧ್ಯಕ್ಷರು ತನ್ನ ಮಿಥ್ಯಾರೋಪದ ಈ ಹೇಳಿಕೆಯನ್ನು ಹಿಂಪಡೆದು ಈ ಬಗ್ಗೆ ಸ್ಪಷ್ಟೀಕರಣ ನೀಡದಿದ್ದರೇ, ಸೂಕ್ತ ಕಾನೂನು ಕ್ರಮ ಕೈಗೊಳ್ಳುವುದು ಅನಿವಾರ್ಯವಾಗಲಿದೆ ಎಂದು ಕಾರ್ಕಳ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕೆ. ಸದಾಶಿವ ದೇವಾಡಿಗ ತಿಳಿಸಿದ್ದಾರೆ.





























































































































































































































error: Content is protected !!
Scroll to Top