ಮಂಗಳೂರು : ದೇರಳಕಟ್ಟೆಯ ಕೆ. ಎಸ್. ಹೆಗ್ಡೆ ಆಸ್ಪತ್ರೆಯಲ್ಲಿ ವೈದ್ಯಕೀಯ ವ್ಯಾಸಂಗ ಮಾಡುತ್ತಿದ್ದ ವಿದ್ಯಾರ್ಥಿಯೊಬ್ಬ ಹೃದಯಾಘಾತದಿಂದ ಸಾವನ್ನಪ್ಪಿದ ಘಟನೆ ಫೆ.13 ರ ರಾತ್ರಿ ನಡೆದಿದೆ.
ಮೃತರನ್ನು ಉಪ್ಪಿನಂಗಡಿ ನಿವಾಸಿ ನಾಗೇಶ್ (23) ಎಂದು ಗುರುತಿಸಲಾಗಿದೆ.
ಕೆ. ಎಸ್. ಹೆಗ್ಡೆ ಆಸ್ಪತ್ರೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಇವರು, ಫೆ.13 ರಂದು ರಾತ್ರಿ ಎಂದಿನಂತೆ ಕೆಲಸ ನಿರ್ವಹಿಸಿ ಆಸ್ಪತ್ರೆಯ ವಿಶ್ರಾಂತಿ ಕೊಠಡಿಯಲ್ಲಿ ಮಲಗಿರುವಾಗ ಸಾವನ್ನಪ್ಪಿದ್ದು ಈ ಬಗ್ಗೆ ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಅಸಹಜ ಸಾವಿನ ಪ್ರಕರಣ ದಾಖಲಾಗಿದೆ.
ಮಂಗಳೂರು : ಮಲಗಿದ್ದಲ್ಲಿಯೇ ವೈದ್ಯಕೀಯ ವಿದ್ಯಾರ್ಥಿ ಸಾವು
Recent Comments
ಕಗ್ಗದ ಸಂದೇಶ
on