ಕಾರ್ಕಳ : ಕೃಷಿ ಉತ್ಪನ್ನ ಮಾರುಕಟ್ಟೆ ಪ್ರಾಂಗಣದಲ್ಲಿ ರೈತ ಸಭಾ ಭವನಕ್ಕೆ ಸಚಿವ ವಿ. ಸುನಿಲ್ ಕುಮಾರ್ ಫೆ. 20ರಂದು ಶಿಲಾನ್ಯಾಸ ನೆರವೇರಿಸಿದರು.
ವಾರ್ಷಿಕ ಕ್ರಿಯಾ ಯೋಜನೆಯಡಿಯಲ್ಲಿ 89 ಲಕ್ಷ ರೂ. ವೆಚ್ಚದಲ್ಲಿ ರೈತ ಸಭಾಭವನ ನಿರ್ಮಾಣವಾಗಲಿದೆ. ಎಪಿಎಂಸಿ ಅಧ್ಯಕ್ಷ ರತ್ನಾಕರ್ ಅಮೀನ್, ಉಪಾಧ್ಯಕ್ಷ ಜೆರಾಲ್ಡ್ ಡಿʼ ಸಿಲ್ವಾ, ಮಾಜಿ ಅಧ್ಯಕ್ಷರಾದ ಮುಟ್ಲುಪಾಡಿ ಸತೀಶ್ ಶೆಟ್ಟಿ, ಅಂತೋನಿ ಡಿʼಸೋಜಾ, ಬಿಜೆಪಿ ಕ್ಷೇತ್ರಾಧ್ಯಕ್ಷ ಮಹಾವೀರ ಹೆಗ್ಡೆ, ಎಪಿಎಂಸಿ ನಿರ್ದೇಶಕರು, ಸದಸ್ಯರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.