ಕೊರೋನಾ 4ನೇ ಅಲೆ : ಶೀಘ್ರದಲ್ಲೇ ಅಧಿಕಾರಿಗಳೊಂದಿಗೆ ಸಿಎಂ ಬೊಮ್ಮಾಯಿ ಸಭೆ

ಬೆಂಗಳೂರು : ಹಲವು ರಾಷ್ಟ್ರಗಳಲ್ಲಿ ಕೊರೊನಾ ಸೋಂಕು ಪ್ರಕರಣಗಳು ಹೆಚ್ಚಾಗುತ್ತಿದ್ದು, ಭಾರತಕ್ಕೂ ಕೊರೊನಾ ನಾಲ್ಕನೇ ಅಲೆ ಆತಂಕ ಎದುರಾಗಿದೆ. ಈ ಹಿನ್ನೆಲೆಯಲ್ಲಿ ಮುಂಜಾಗೃತ ಕ್ರಮಗಳ ಕುರಿತಾದ ಚರ್ಚೆಗಳನ್ನು ನಡೆಸಲು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಶೀಘ್ರದಲ್ಲಿಯೇ ಅಧಿಕಾರಿಗಳೊಂದಿಗೆ ಸಭೆ ನಡೆಸಲಿದ್ದಾರೆ.
ಶೂನ್ಯ ವೇಳೆಯಲ್ಲಿ ಬಿಜೆಪಿಯ ಶಶೀಲ್ ನಮೋಶಿ ಅವರ ಮಾಡಿದ ಪ್ರಸ್ತಾವನೆಗೆ ಉತ್ತರಿಸಿದ ಅವರು ದೇಶದಲ್ಲಿ ಮೂರನೇ ಅಲೆಯ ಮುನ್ಸೂಚನೆ ನೀಡಿದ್ದ ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ (ಐಐಟಿ) ಕಾನ್ಪುರ ಈಗ ಆಗಸ್ಟ್ 2022 ರಲ್ಲಿ ನಾಲ್ಕನೇ ಅಲೆ ಎದುರಾಗಲಿದೆ ಎಂದು ಹೇಳಿದೆ. ದೇಶದಲ್ಲಿ ವ್ಯಾಪಕವಾದ ಲಸಿಕಾ ಅಭಿಯಾನ ನಾಲ್ಕನೇ ಅಲೆ ವಿರುದ್ಧ ಹೋರಾಡಲು ಸಹಾಯ ಮಾಡುತ್ತದೆ. ಆದರೆ, ಜನರು ಕೋವಿಡ್ ನಿಯಮಗಳ ಅನುಸರಿಸುವ ಅವಶ್ಯಕವಿದೆ. ಈ ಕುರಿತು ಸಭೆಯಲ್ಲಿ ಚರ್ಚೆ ನಡೆಸಲಾಗುತ್ತದೆ, ಕೊರೋನಾ ನಾಲ್ಕನೇ ಅಲೆ ಕುರಿತು ಆತಂಕ ಪಡುವ ಅಗತ್ಯವಿಲ್ಲ ಎಂದು ಹೇಳಿದ್ದಾರೆ.





























































































































































































































error: Content is protected !!
Scroll to Top