ಮಂಗಳೂರು: ಆರ್ಎಸ್ಎಸ್ ಮುಖಂಡ ಕಲ್ಲಡ್ಕ ಪ್ರಭಾಕರ ಭಟ್ ಅವರ ಆರೋಗ್ಯದಲ್ಲಿ ಏರುಪೇರಾಗಿದ್ದು, ಅವರನ್ನು ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದು ಬಂದಿದೆ.
ಅವರು ಕಲ್ಲಡ್ಕದ ಶ್ರೀರಾಮ ವಿದ್ಯಾಕೇಂದ್ರಕ್ಕೆ ಭೇಟಿ ನೀಡಿದ್ದ ಸಂದರ್ಭದಲ್ಲಿ ಅವರ ಆರೋಗ್ಯದಲ್ಲಿ ಸಮಸ್ಯೆ ಕಾಣಿಸಿಕೊಂಡಿದೆ. ಆ ಕೂಡಲೇ ಅವರನ್ನು ನಗರದ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಅವರಿಗೆ ಐಸಿಯುವಿನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ತಿಳಿದು ಬಂದಿದೆ.
ಪ್ರಭಾಕರ್ ಭಟ್ ಅವರು ಹಿಂದುತ್ವದ ಉಳಿವಿಗಾಗಿ ಶ್ರಮಿಸುತ್ತಿದ್ದವರು. ಇತ್ತೀಚೆಗೆ ಮಂಗಳೂರು ವಿವಿಯ ಕಾರ್ಯಕ್ರಮವೊಂದಕ್ಕೆ ಅವರನ್ನು ಆಹ್ವಾನಿಸಿದಕ್ಕಾಗಿ, ಮುಸ್ಲಿಂ ಸಂಘಟನೆಯೊಂದು ಪ್ರತಿಭಟನೆ ಸಹ ನಡೆಸಿ, ವಿವಾದ ಸೃಷ್ಟಿಸಿತ್ತು.