ಕಾರ್ಕಳ : ತಾಲೂಕು ಕಾನೂನು ಸೇವೆಗಳ ಸಮಿತಿ, ನ್ಯಾಯವಾದಿಗಳ ಸಂಘ, ವಲಯ ಅರಣ್ಯ ಇಲಾಖೆ ಕಾರ್ಕಳ ಇವರ ಸಂಯುಕ್ತ ಆಶ್ರಯದಲ್ಲಿ ಎ. 22 ರಂದು ಬೆಳಗ್ಗೆ 10 ಗಂಟೆಗೆ ಪೃಥ್ವಿ ದಿನಾಚರಣೆಯ ಅಂಗವಾಗಿ ಉಚಿತ ಕಾನೂನು ಅರಿವು ನೆರವು ಮಾಹಿತಿ ಕಾರ್ಯಕ್ರಮವು ನಗರದ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಆವರಣದಲ್ಲಿ ನಡೆಯಲಿದೆ.
ಅಧ್ಯಕ್ಷತೆಯನ್ನು ತಾಲೂಕು ಕಾನೂನು ಸೇವೆಗಳ ಸಮಿತಿಯ ಸದಸ್ಯ ಕಾರ್ಯದರ್ಶಿ, ಪ್ರಧಾನ ಸಿವಿಲ್ ನ್ಯಾಯಾಧೀಶೆ ಚೇತನಾ ಎಸ್. ಎಫ್. ವಹಿಸಲಿದ್ದಾರೆ. ಅತಿಥಿಗಳಾಗಿ ತಾಲೂಕು ಕಾನೂನು ಸೇವೆಗಳ ಸಮಿತಿಯ ಕಾರ್ಯನಿರ್ವಾಹಕ ಸದಸ್ಯ ಕಾರ್ಯದರ್ಶಿ ಹಾಗೂ ಸಹಾಯಕ ಸರ್ಕಾರಿ ಅಭಿಯೋಜಕಿ ಶೋಭಾ ಎಮ್. ನಾಯಕ್, ಕಾರ್ಕಳ ತಹಶೀಲ್ದಾರ್ ಪ್ರದೀಪ್ ಕುರ್ಡೇಕರ್, ಕಾರ್ಕಳ ವಲಯ ಅರಣ್ಯಾಧಿಕಾರಿ ಸ್ಮಿತಾ ಡಿ., ಉಪ ವಲಯ ಅರಣ್ಯಾಧಿಕಾರಿ ಪ್ರಕಾಶ ಚಂದ್ರ ಹಾಗೂ ಸಂಪನ್ಮೂಲ ವ್ಯಕ್ತಿಯಾಗಿ ನ್ಯಾಯವಾದಿ ಅನಿಲ್ ಕುಮಾರ್ ಉಪಸ್ಥಿತರಿರಲಿದ್ದಾರೆ.