ನವದೆಹಲಿ: ಕಳೆದ ಎರಡು ತಿಂಗಳಲ್ಲಿ ಹೆಚ್ಚುತ್ತಿರುವ ಎಲೆಕ್ಟ್ರಿಕ್ ದ್ವಿಚಕ್ರ ವಾಹನಗಳ ದುರ್ಘಟನೆಗಳ ಕುರಿತು ತನಿಖೆ ನಡೆಸಲು ಸರ್ಕಾರ ತಜ್ಞರ ಸಮಿತಿಯನ್ನು ರಚಿಸಿದ್ದು, ಸಮಿತಿಯು ಪರಿಹಾರ ಕ್ರಮಗಳ ಬಗ್ಗೆ ಶಿಫಾರಸುಗಳನ್ನು ಮಾಡುತ್ತದೆ ಎಂದು ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ತಿಳಿಸಿದ್ದಾರೆ.
ವರದಿಗಳ ಆಧಾರದ ಮೇಲೆ ಸರ್ಕಾರವು ಡೀಫಾಲ್ಟ್ ಕಂಪನಿಗಳ ಮೇಲೆ ಅಗತ್ಯ ಆದೇಶಗಳನ್ನು ನೀಡುತ್ತದೆ. ಎಲೆಕ್ಟ್ರಿಕ್ ವಾಹನಗಳಿಗೆ ಗುಣಮಟ್ಟ ಕೇಂದ್ರಿತ ಮಾರ್ಗಸೂಚಿಗಳನ್ನು ಸಹ ನೀಡುತ್ತದೆ. ಯಾವುದೇ ಕಂಪನಿಯು ತಮ್ಮ ಪ್ರಕ್ರಿಯೆಗಳಲ್ಲಿ ನಿರ್ಲಕ್ಷ್ಯ ತೋರಿದರೆ, ಭಾರೀ ದಂಡವನ್ನು ವಿಧಿಸಲಾಗುವುದು ಮತ್ತು ಎಲ್ಲಾ ದೋಷಯುಕ್ತ ವಾಹನಗಳನ್ನು ಹಿಂಪಡೆಯಲು ಆದೇಶಿಸಲಾಗುವುದು ಎಂದು ಗಡ್ಕರಿ ಹೇಳಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದಲ್ಲಿ ಪ್ರತಿಯೊಬ್ಬ ಪ್ರಯಾಣಿಕರ ಸುರಕ್ಷತೆಯನ್ನು ಖಚಿತಪಡಿಸಿಕೊಳ್ಳಲು ಸರ್ಕಾರ ಬದ್ಧವಾಗಿದೆ ಎಂದು ಅವರು ಹೇಳಿದರು.
ಹೆಚ್ಚುತ್ತಿರುವ ಎಲೆಕ್ಟ್ರಿಕ್ ವಾಹನಗಳ ದುರ್ಘಟನೆ : ತನಿಖೆಗೆ ಸಮಿತಿ ರಚನೆ
Recent Comments
ಕಗ್ಗದ ಸಂದೇಶ
on