ಯಾವುದೇ ಪಕ್ಷ ಸೇರುವ ಪ್ರಸ್ತಾವ ಇಲ್ಲ : ಸಂಸದೆ ಸುಮಲತಾ

ಮಂಡ್ಯ : ಯಾವುದೇ ಪಕ್ಷ ಸೇರುವ ಪ್ರಸ್ತಾವ ನನ್ನ ಮುಂದಿಲ್ಲ, ಅಂತಹ ಪ್ರಸ್ತಾವ ಬಂದರೆ ಜನಾಭಿಪ್ರಾಯ ಸಂಗ್ರಹಿಸಿ ಮುಂದಿನ ತೀರ್ಮಾನ ಕೈಗೊಳ್ಳುವುದಾಗಿ ಸಂಸದೆ ಸುಮಲತಾ ಎ. 28ರಂದು ಸ್ಪಷ್ಟನೆ ನೀಡಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಬಿಜೆಪಿ ಸೇರಲಿದ್ದೇನೆ ಎಂಬ ಸುದ್ದಿಗಳು ಹರಿದಾಡುತ್ತಿದ್ದು, ಈ ಬಗ್ಗೆ ತಲೆಕೆಡಿಸಿಕೊಳ್ಳುವ ಅವಶ್ಯಕತೆಯಿಲ್ಲ. ಈ ಬಗ್ಗೆ ಎಲ್ಲಿಯೂ ನಾನು ಹೇಳಿಲ್ಲ. ಅಭಿವೃದ್ಧಿಯ ವಿಚಾರವಾಗಿ ಮಾತ್ರ ಬಿಜೆಪಿ ಮುಖಂಡರನ್ನು ಭೇಟಿಯಾಗಿದ್ದೇನೆಯೇ ಹೊರತು ಪಕ್ಷ ಸೇರ್ಪಡೆಯ ಉದ್ದೇಶವಿಲ್ಲ, ನನ್ನ ಬೆಂಬಲಿಗರು ಬಿಜೆಪಿ ಸೇರಿದರು ಎಂದ ಮಾತ್ರಕ್ಕೆ ನಾನೂ ಬಿಜೆಪಿ ಸೇರಲಿದ್ದೇನೆ ಎಂದು ಬಿಂಬಿಸಲಾಗುತ್ತಿದೆ ಎಂದರು.
ಬಾಲಿವುಡ್‌ ನಟ ಅಜಯ್‌ ದೇವಗನ್‌ ಟ್ವೀಟ್‌ ಕುರಿತು ಪ್ರತಿಕ್ರಯಿಸಿದ ಅವರು ಕರ್ನಾಟಕದಲ್ಲಿ ಕನ್ನಡಕ್ಕೆ ಪ್ರಾಮುಖ್ಯತೆಯಿದೆ. ನಮ್ಮ ಭಾಷೆಗೆ ಧಕ್ಕೆಯಾದರೆ ಯಾರೂ ಸುಮ್ಮನೆ ಕುಳಿತುಕೊಳ್ಳುವುದಿಲ್ಲ. ಉತ್ತರ ಭಾರತದಲ್ಲಿ ಹಿಂದಿಗೆ ಪ್ರಾಮುಖ್ಯತೆ ಇರುವಂತೆ ನಮ್ಮ ರಾಜ್ಯದಲ್ಲಿ ಕನ್ನಡಕ್ಕೆ ಹೆಚ್ಚಿನ ಪ್ರಾಮುಖ್ಯತೆ ಇದೆ ಎಂದರು.





























































































































































































































error: Content is protected !!
Scroll to Top