ಹಂಗಾಮುವಾರು ಬೆಳೆ ವಿಮೆ ಇತ್ಯರ್ಥಪಡಿಸಲು ಕ್ರಮ – ಬಿ.ಸಿ ಪಾಟೀಲ್

ಬೆಂಗಳೂರು : ಹಂಗಾಮುವಾರು ಬೆಳೆ ವಿಮೆ ಶೀಘ್ರವಾಗಿ ಇತ್ಯರ್ಥಪಡಿಸುವ ನಿಟ್ಟಿನಲ್ಲಿ ಕೃಷಿ ಸಚಿವ ಬಿ.ಸಿ. ಪಾಟೀಲರ ಅಧ್ಯಕ್ಷತೆಯಲ್ಲಿ ವಿಕಾಸಸೌಧದಲ್ಲಿ ಮಹತ್ವದ ಸಭೆ ನಡೆಯಿತು. ಸಭೆಯಲ್ಲಿ ಇ-ಆಡಳಿತ ಹಾಗೂ ಆರ್ಥಿಕ ಸಾಂಖ್ಯಿಕ ಇಲಾಖಾ ಅಧಿಕಾರಿಗಳೊಂದಿಗೆ ತಾಂತ್ರಿಕ ದೋಷಗಳು ಮತ್ತು ಪರಿಹಾರಗಳ ಬಗ್ಗೆ ಚರ್ಚಿಸಲಾಯಿತು. ಬೆಳೆ ವಿಮೆಗೆ ಅನುಕೂಲ ಕಲ್ಪಿಸುವ “ನನ್ನ ಬೆಳೆ ನನ್ನ ಹಕ್ಕು” ಬೆಳೆ ಸಮೀಕ್ಷೆ ಯೋಜನೆಗೆ ರೈತರು ಹೆಚ್ಚು ಒತ್ತು ನೀಡಿ ಮೊಬೈಲ್ ಬೆಳೆ ಸಮೀಕ್ಷೆಯನ್ನು ಯಶಸ್ವಿಯಾಗಿ ನೋಡಿಕೊಳ್ಳಬೇಕು ಎಂದು ಸಚಿವರು ಸೂಚಿಸಿದರು. ಬೆಳೆ ಕಟಾವು ಪ್ರಯೋಗಗಳ ದತ್ತಾಂಶ ಹಾಗೂ ಬೆಳೆ ಸಮೀಕ್ಷೆ ದತ್ತಾಂಶವನ್ನು ಅಧಿಕಾರಿಗಳು ತಾಳೆ ಮಾಡಿ ಅಪ್ಲೋಡ್ ಮಾಡಿ ಬೆಳೆ ವಿಮೆಯನ್ನು ಘಟಕವಾರು 2022ರ ನವೆಂಬರ್ ನೊಳಗೆ ಇತ್ಯರ್ಥಪಡಿಸಬೇಕು ಎಂದು ಸಭೆಯಲ್ಲಿ ತೀರ್ಮಾನಿಸಲಾಯಿತು.









































































































































































error: Content is protected !!
Scroll to Top