ಬೆಂಗಳೂರು : ಈ ಹಿಂದೆ ಕರ್ನಾಟಕ ಸರಕಾರ ಘೋಷಣೆ ಮಾಡಿದ್ದ ಪರಿಶಿಷ್ಟ ಜಾತಿ ಹಾಗೂ ಪಂಗಡದ ಬಿಪಿಎಲ್ ಗ್ರಾಹಕರಿಗೆ 75 ಯೂನಿಟ್ ಉಚಿತ ವಿದ್ಯುತ್ ಯೋಜನೆಯನ್ನು ನಗರ ಪ್ರದೇಶಕ್ಕೂ ವಿಸ್ತರಣೆ ಮಾಡಿ ಆದೇಶ ಹೊರಡಿಸಿದೆ. ಮೇ 13ರಂದು ಸರಕಾರ ಹೊರಡಿಸಿದ ಆದೇಶದಲ್ಲಿ ಗ್ರಾಮೀಣ ಭಾಗದ ಬಡವರಿಗೆ ಮಾತ್ರ ಯೋಜನೆ ಸೌಲಭ್ಯ ಇತ್ತು. ಇದೀಗ ಹಳೆ ಆದೇಶವನ್ನು ಹಿಂದಕ್ಕೆ ಪಡೆದು ಹೊಸ ಆದೇಶ ಮಾಡಿದ್ದು ಈ ಮೂಲಕ ಸರಕಾರ ಮಹತ್ವದ ನಿರ್ಧಾರ ಕೈಗೊಂಡಿದೆ. ಭಾಗ್ಯಜ್ಯೋತಿ ಹಾಗೂ ಕುಟೀರ ಜ್ಯೋತಿ ಯೋಜನೆ ವ್ಯಾಪ್ತಿಯಲ್ಲಿ ಬರುವವರೂ ಸೇರಿದಂತೆ ಪರಿಶಿಷ್ಟ ಜಾತಿ ಹಾಗೂ ಪಂಗಡದ ಫಲಾನುಭವಿಗಳ ಮನೆಯಲ್ಲಿ ಇನ್ನು ಮುಂದೆ ವಿದ್ಯುತ್ ನಿರಂತರವಾಗಲಿದೆ.