ಮೂಡಬಿದಿರೆಯ ಇರುವೈಲಿನಲ್ಲಿ ಭೂ ಕುಸಿತ : ಕುಸಿಯುವ ಭೀತಿಯಲ್ಲಿ ಮನೆ

ಮೂಡುಬಿದಿರೆ : ಕಳೆದ ಐದು ದಿನಗಳಿಂದ ಸತತವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಇರುವೈಲು ಗ್ರಾಮ ಪಂಚಾಯತ್ ವ್ಯಾಪ್ತಿಯ ಪಂಜ ಎಂಬಲ್ಲಿ ಭೂಕುಸಿತವಾಗಿದ್ದು ಪ್ರಶಾಂತ್ ಮತ್ತು ರಾಜೇಶ್ ಎಂಬವರ ಅಡಿಕೆ ತೋಟ ಸಂಪೂರ್ಣವಾಗಿ ಹಾನಿಗೀಡಾಗಿದೆ. 100 ಗಿಡಗಳು ಧರೆಗುರುಳಿದ್ದು, ಸುಮಾರು 25 ಲಕ್ಷ ರೂ. ನಷ್ಟ ಅಂದಾಜಿಸಲಾಗಿದೆ. ತೋಟದ ಮೇಲ್ಭಾಗದಲ್ಲಿರುವ ಮನೆ ಕುಸಿಯುವ ಭೀತಿಯಲ್ಲಿದೆ.

ಮೂಡುಬಿದಿರೆ ತಾಲೂಕು ತಹಶೀಲ್ದಾರ್ ಪುಟ್ಟರಾಜು, ಕಂದಾಯ ನಿರೀಕ್ಷಕ ಮಂಜುನಾಥ್ ಮತ್ತು ಗ್ರಾಮ ಲೆಕ್ಕಾಧಿಕಾರಿ ಗಾಯತ್ರಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿರುತ್ತಾರೆ. ಇರುವೈಲು ಗ್ರಾಮ ಪಂಚಾಯತ್ ಅಧ್ಯಕ್ಷ ವಲೇರಿಯನ್ ಕುಟಿನ್ನ, ಪಂಚಾಯತ್ ಸದಸ್ಯ ನಾಗೇಶ್ ಅಮೀನ್ , ಎಪಿಎಂಸಿ ಸದಸ್ಯ ಚಂದ್ರಹಾಸ ಸನಿಲ್, ಪಿಡಿಓ ಕಾಂತಪ್ಪ, ಹರೀಶ್ ಕರ್ಕೇರ ಸೇರಿದಂತೆ ಸ್ಥಳೀಯ ಪ್ರಮುಖರು ಸ್ಥಳಕ್ಕೆ ಭೇಟಿ ನೀಡಿದ್ದಾರೆ.



































































































































































































































































error: Content is protected !!
Scroll to Top