ಮೌಲ್ಯ ಸುಧಾ ಮಾಲಿಕೆಯಲ್ಲಿಂದು : ಕಗ್ಗದ ಬೆಳಕು – ವಿಶೇಷ ಉಪನ್ಯಾಸ

ಕಾರ್ಕಳ : ‌ಶ್ರೀ ಮಹಾಗಣಪತಿ ದೇವಸ್ಥಾನ ಗಣಿತನಗರ ಹಾಗೂ ಅಜೆಕಾರ್ ಪದ್ಮಗೋಪಾಲ್ ಎಜ್ಯುಕೇಶನ್ ಟ್ರಸ್ಟ್ ಸಹಯೋಗದೊಂದಿಗೆ ನಡೆಯುತ್ತಿರುವ ತಿಂಗಳ ಸರಣಿ ಕಾರ್ಯಕ್ರಮ ಮೌಲ್ಯ ಸುಧಾದ ಎರಡನೆ ಸಂಚಿಕೆ‌ ಜು. 16ರ ಸಂಜೆ 5.30ಕ್ಕೆ ಜ್ಞಾನಸುಧಾ ಸಭಾಂಗಣದಲ್ಲಿ ನಡೆಯಲಿದೆ. ಮುಂಡ್ಕೂರು ವಿದ್ಯಾವರ್ಧಕ ಪದವಿ ಪೂರ್ವ ಕಾಲೇಜಿನ ಅಧ್ಯಾಪಕ, ಕಾರ್ಕಳ ಸಾಹಿತ್ಯ ಪರಿಷತ್‌ ತಾಲೂಕು ಘಟಕದ ಅಧ್ಯಕ್ಷ ಪ್ರಭಾಕರ ಶೆಟ್ಟಿ ಕೊಂಡಳ್ಳಿ ಕಗ್ಗದ ಬೆಳಕು ಎಂಬ ವಿಷಯದ ಕುರಿತು ವಿಶೇಷ ಉಪನ್ಯಾಸ ನೀಡಲಿರುವರು. ಸಾರ್ವಜನಿಕರು ಕಾಯಕ್ರಮದಲ್ಲಿ ಭಾಗವಹಿಸುವಂತೆ ಸಂಘಟಕರು ವಿನಂತಿಸಿದ್ದಾರೆ.



































































































































































































































































error: Content is protected !!
Scroll to Top