ಕಾರ್ಕಳ : ಶ್ರೀ ದುರ್ಗ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ ಕುಕ್ಕುಂದೂರುವಿನಲ್ಲಿ ಗ್ರಾಮೀಣಾಭಿವೃದ್ದಿ ಮತ್ತು ಪಂಚಾಯತ್ ರಾಜ್ ಇಲಾಖೆ, ಎಚ್ಸಿಎಲ್ ಸಾಹಸ್ ಸಂಸ್ಥೆ ವತಿಯಿಂದ ಮಕ್ಕಳಲ್ಲಿ ಸ್ವಚ್ಛತೆ ಹಾಗೂ ತ್ಯಾಜ್ಯ ವಿಲೇವಾರಿ ಬಗ್ಗೆ ಅರಿವು ಮೂಡಿಸುವ ಕಾರ್ಯಕ್ರಮ ಜು. 20ರಂದು ನಡೆಯಿತು. ಕುಕ್ಕುಂದೂರು ಪಂಚಾಯತ್ ಅಭಿವೃದ್ಧಿ ಅಧಿಕಾರಿ ಪ್ರದೀಪ್ ಕುಮಾರ್ ಶೆಟ್ಟಿ ಕಾರ್ಯಕ್ರಮ ಉದ್ಘಾಟಿಸಿದರು. ಪ್ರಕಾಶ್ ಜ್ಯುವೆಲ್ಲರಿ ಮಾಲಕ ಪ್ರಕಾಶ್ ಆಚಾರ್ಯ, ರಮಾನಾಥ ನಾಯಕ್, ಬಾಲಕೃಷ್ಣ ಶೆಟ್ಟಿ, ರೇಖಾ ಕಾಮತ್, ಕಾರ್ತಿಕ್, ಮುಖ್ಯ ಶಿಕ್ಷಕ ಜಗದೀಶ್ ಹೆಗ್ಡೆ, ಶಿಕ್ಷಕ ಎಚ್.ಜಿ. ಬಂಡಿವಡ್ಡರ್ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಗ್ರಾ.ಪಂ. ಉಪಾಧ್ಯಕ್ಷ ಅನಿಲ್ ಪೂಜಾರಿ ಅಧ್ಯಕ್ಷತೆಯನ್ನು ವಹಿಸಿದ್ದರು.