ಕಾರ್ಕಳ : ಜ್ಞಾನಸುಧಾ ಪಿಯು ಕಾಲೇಜಿನ ದ್ವಿತೀಯ ವಾಣಿಜ್ಯ ವಿಭಾಗದ ವಿದ್ಯಾರ್ಥಿನಿ ಶ್ರೀಜಾ ಶೆಟ್ಟಿ ಅವರು ಇನ್ಸ್ಟಿಟ್ಯೂಟ್ ಆಫ್ ಕಂಪೆನಿ ಸೆಕ್ರೆಟರಿಸ್ ನಡೆಸುವ ರಾಷ್ಟ್ರಮಟ್ಟದ ಸಿಎಸ್ ಫೌಂಡೇಶನ್ ಪರೀಕ್ಷೆಯಲ್ಲಿಉತ್ತೀರ್ಣರಾಗಿದ್ದಾರೆ. ಈ ಮೂಲಕ ಮುಂದಿನ ಸಿಎಸ್ ಎಕ್ಸಿಕ್ಯುಟಿವ್ ಪರೀಕ್ಷೆಗೆ ಅರ್ಹತೆ ಗಳಿಸಿದ್ದಾರೆ. ಶ್ರೀಜಾ ಶೆಟ್ಟಿ ಮಿಯಾರು ಕುಂಟಿಬೈಲು ನಿವಾಸಿ ಪ್ರಶಾಂತ್ ಶೆಟ್ಟಿ ಹಾಗೂ ಶರ್ಮಿಳಾ ದಂಪತಿ ಪುತ್ರಿ. ಈಕೆಯ ಸಾಧನೆಗೆ ಅಜೆಕಾರ್ ಪದ್ಮಗೋಪಾಲ್ ಎಜ್ಯುಕೇಶನ್ ಟ್ರಸ್ಟ್ ಅಧ್ಯಕ್ಷ ಡಾ. ಸುಧಾಕರ್ ಶೆಟ್ಟಿ ಅಭಿನಂದಿಸಿದ್ದಾರೆ.
ಉತ್ತಮ ಅವಕಾಶ
ವಾಣಿಜ್ಯ ವಿಭಾಗದಲ್ಲಿಅತ್ಯಂತ ಮಹತ್ವ ಹೊಂದಿರುವ ಸಿಎಸ್ ಪರೀಕ್ಷೆಯಲ್ಲಿ ಉತ್ತೀರ್ಣರಾದವರಿಗೆ ಬಹುರಾಷ್ಟ್ರೀಯ ಕಂಪೆನಿಗಳ ಸಿ.ಇ.ಒ. ಮತ್ತು ಇನ್ನಿತರ ಉನ್ನತ ಹುದ್ದೆಗಳಿಗೆ ಅವಕಾಶ ವಿಫುಲವಾಗಿರುತ್ತದೆ.
