ಕಾರ್ಕಳ : ಮಿಯ್ಯಾರು ಗ್ರಾಮದ ಜೋಡುಕಟ್ಟೆ ಕಾರೋಲ್ ಗುಡ್ಡೆ ನಿವಾಸಿ ಮಣಿಕಂಠ (41) ಎಂಬವರು ಆ. 5ರಂದು ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ವಿಪರೀತ ಮದ್ಯಪಾನ ಮಾಡುತ್ತಿದ್ದ ಮಣಿಕಂಠ ಅದೇ ಕಾರಣಕ್ಕೆ ಖಿನ್ನತೆಗೊಳಗಾಗಿ ಮನೆಯಲ್ಲೇ ನೇಣುಬಿಗಿದು ಆತ್ಮಹತ್ಯೆಗೆ ಶರಣಾಗಿದ್ದಾರೆ. ಕಾರ್ಕಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.