ಪೇಸಿಎಂ ನಾನೇ ಪೋಸ್ಟರ್ ಅಂಟಿಸುತ್ತೇನೆ – ತಾಕತ್ತಿದ್ದರೆ ಬಂಧಿಸಿ : ಸವಾಲೆಸೆದ ಸಿದ್ದರಾಮಯ್ಯ

ಬೆಂಗಳೂರು : ಪೇಸಿಎಂ- ಶೇ. 40 ಸ್ವೀಕರಿಸಲಾಗುವುದು ಎಂಬ ತಲೆಬರಹದಡಿ ಕಾಂಗ್ರೆಸ್ ಆರಂಭಿಸಿರುವ ಅಭಿಯಾನ ಇದೀಗ ಬಿಜೆಪಿ ಕಾಂಗ್ರೆಸ್‌ ಹಗ್ಗಜಗ್ಗಾಟಕ್ಕೆ ಕಾರಣವಾಗಿದೆ. ರಾಜ್ಯ ಬಿಜೆಪಿ ಸರಕಾರ ಶೇ. 40ರಷ್ಟು ಕಮಿಷನ್ ಪಡೆಯುವ ಸರಕಾರ ಎಂಬ ಕಾಂಗ್ರೆಸ್‌ ಅಭಿಯಾನದ ಮುಂದುವರಿದ ಭಾಗವಾಗಿ ಪೇಸಿಎಂ ಪೋಸ್ಟರ್‌ ಅಂಟಿಸುವ ಕಾರ್ಯವಾಗಿದೆ. ಬೆಂಗಳೂರಿನ ಪ್ರಮುಖ ಪ್ರದೇಶಗಳ ಗೋಡೆಗಳ ಮೇಲೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಹೋಲುವ ಚಿತ್ರದ ಕ್ಯೂಆರ್ ಕೋಡ್ ಸಹಿತ ‘ಪೇಸಿಎಂ’ ಎಂದು ಬರೆದ ಭಿತ್ತಿಪತ್ರಗಳು ಕಂಡುಬಂದಿದ್ದು, ಅದರ ಜತೆಗೆ ಮೊಬೈಲ್ ಸಂಖ್ಯೆಯನ್ನೂ ನೀಡಲಾಗಿತ್ತು.

ಪೇಸಿಎಂ ಅಭಿಯಾನ ಕುರಿತು ಸರಣಿ ಟ್ವಿಟ್ ಮಾಡಿರುವ ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ರಾಜ್ಯ ಬಿಜೆಪಿ ಸರಕಾರ ಲಂಚುಗುಳಿತನದ ಬಗ್ಗೆ ಪಕ್ಷದ ಕಾರ್ಯಕರ್ತರ ಜೊತೆ ನಾನೇ ಪೋಸ್ಟರ್ ಅಂಟಿಸುತ್ತೇನೆ, ತಾಕತ್ತಿದ್ದರೆ ನಮ್ಮನ್ನೂ ಬಂಧಿಸಿ. ನನ್ನ ಮತ್ತು ಡಿ.ಕೆ. ಶಿವಕುಮಾರ್‌ ಬಗ್ಗೆ ಪೋಸ್ಟರ್ ಅಂಟಿಸಿದ್ದೀರಲ್ಲಾ, ಅದರ ಬಗ್ಗೆ ಸಿಎಂ ಯಾಕೆ ಮೌನವಾಗಿದ್ದಾರೆ ? ಪೊಲೀಸರ ಕಣ್ಣು ಯಾಕೆ ಕುರುಡಾಗಿದೆ ? ಎಂದು ಪ್ರಶ್ನಿಸಿದ್ದಾರೆ.





























































































































































































































error: Content is protected !!
Scroll to Top