ಕಾರ್ಕಳ : ಸಾಣೂರು ಗ್ರಾಮದ ಶುಂಠಿಗುಡ್ಡೆ ಎಂಬಲ್ಲಿಯ ರಬ್ಬರ್ ತೋಟದಲ್ಲಿ ಸುಟ್ಟು ಕರಕಲಾದ ದೇಹವೊಂದು ಬುಧವಾರ ಪತ್ತೆಯಾಗಿದೆ. ರಬ್ಬರ್ ತೋಟದಲ್ಲಿ ಕಾರ್ಮಿಕನಾಗಿದ್ದ ವ್ಯಕ್ತಿ ಬೆಂಕಿಹಚ್ಚಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ಪೊಲೀಸರು ಸ್ಥಳಕ್ಕೆ ತೆರಳಿ ಈ ಕುರಿತು ಪರಿಶೀಲನೆ ನಡೆಸುತ್ತಿದ್ದಾರೆ. ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿದುಬರಬೇಕಿದೆ.































































