ಅನ್ಯ ಧರ್ಮಗಳಿಗೆ ಹೋದವರಿಗೆ ಮೀಸಲಾತಿ ಕೇಳುವ ಹಕ್ಕಿಲ್ಲ
ಹೊಸದಿಲ್ಲಿ : ಕ್ರಿಶ್ಚಿಯನ್ ಧರ್ಮಕ್ಕೆ ಮತಾಂತರಗೊಳ್ಳುವ ಹಿಂದೂಗಳಿಗೆ ಮೀಸಲಾತಿಯ ಪ್ರಯೋಜನ ನಿಲ್ಲಿಸುವಂತೆ ವಿಶ್ವ ಹಿಂದೂ ಪರಿಷತ್ ಕೇಂದ್ರ ಸರ್ಕಾರವನ್ನು ಒತ್ತಾಯಿಸಿದೆ.
ಕ್ರಿಶ್ಚಿಯನ್ ಧರ್ಮಕ್ಕೆ ಮತಾಂತರಗೊಂಡವರು ಇನ್ನೂ ತಮ್ಮ ಹಿಂದೂ ಹೆಸರುಗಳು ಮತ್ತು ರುಜುವಾತುಗಳನ್ನು ದಾಖಲೆಗಳಲ್ಲಿ ಬಳಸುತ್ತಿದ್ದಾರೆ. ಪರಿಶಿಷ್ಟ ಜಾತಿ (ಎಸ್ಸಿ) ಮತ್ತು ಪರಿಶಿಷ್ಟ ಪಂಗಡಗಳಿಗೆ (ಎಸ್ಟಿ) ನೀಡಿರುವ ಮೀಸಲಾತಿಯಿಂದ ಲಾಭ ಪಡೆಯುತ್ತಿದ್ದಾರೆ ಎಂದು ವಿಎಚ್ಪಿ ರಾಷ್ಟ್ರೀಯ ವಕ್ತಾರ ವಿಜಯ್ ಶಂಕರ್ ತಿವಾರಿ ಹೇಳಿದ್ದಾರೆ.
ಕೇಂದ್ರ ಸರ್ಕಾರ ಎಸ್ಸಿ ಮತ್ತು ಎಸ್ಟಿ ಸಮುದಾಯದಿಂದ ಬಂದವರು ಮತ್ತು ಕ್ರಿಶ್ಚಿಯನ್ ಧರ್ಮಕ್ಕೆ ಮತಾಂತರವಾದಾಗ ಮೀಸಲಾತಿ ಪ್ರಯೋಜನಗಳನ್ನು ಪಡೆಯುವುದಿಲ್ಲ ಎಂದು ಖಚಿತಪಡಿಸಿಕೊಳ್ಳಲು ಕಾನೂನು ರೂಪಿಸಬೇಕು ಮತ್ತು ಸಮೀಕ್ಷೆ ಮಾಡಬೇಕು ಎಂದು ವಿಜಯ್ ಶಂಕರ್ ತಿವಾರಿ ಹೇಳಿದ್ದಾರೆ.
ಮತಾಂತರವಾಗಿ ಹಿಂದೂ ಧರ್ಮ ಬಿಟ್ಟು ಕ್ರಿಶ್ಚಿಯನ್ ಧರ್ಮಕ್ಕೆ ಹೋಗುವವರು ಪಡೆಯುತ್ತಿರುವ ಮೀಸಲಾತಿ ತೆಗೆಯುವಂತೆ ಮುಂದಿನ ದಿನಗಳಲ್ಲಿ ವಿಶ್ವ ಹಿಂದೂ ಪರಿಷತ್ ಸಂಘಟನೆ ಜಾಗೃತಿ ಅಭಿಯಾನವನ್ನು ಕೈಗೊಳ್ಳಲಿದೆ ಎಂದು ವಿಜಯ್ ಶಂಕರ್ ತಿವಾರಿ ಹೇಳಿದ್ದಾರೆ.