ಉಪ್ಪಿನಂಗಡಿ : ಸರಕಾರಿ ಬಸ್ಸೊಂದು ಬೈಕ್ಗೆ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಗಂಭೀರವಾಗಿ ಗಾಯಗೊಂಡ ಘಟನೆ ಉಪ್ಪಿನಂಗಡಿಯ ಹಳೇ ಅರಣ್ಯ ತಪಾಸಣಾ ಕೇಂದ್ರದ ಬಳಿ ಇಂದು ನಡೆದಿದೆ. ಸವಾರ ಭರತ್ ಕುಮಾರ್ ಬಜತ್ತೂರು ಗ್ರಾಮದ ಬೆದ್ರೋಡಿ ನಿವಾಸಿಯಾಗಿದ್ದು, ಕಾರ್ಯನಿಮಿತ್ತ ಉಪ್ಪಿನಂಗಡಿಗೆ ಬೈಕ್ನಲ್ಲಿ ಸಂಚರಿಸುತ್ತಿದ್ದ ವೇಳೆ ಈ ಅವಘಡ ಸಂಭವಿಸಿದೆ. ಅಪಘಾತದಲ್ಲಿ ಬೈಕ್ ಬಸ್ಸಿನಡಿಗೆ ಸಿಲುಕಿ ನಜ್ಜುಗುಜ್ಜಾಗಿದೆ. ಬೈಕ್ ಸವಾರನಿಗೆ ಗಂಭೀರವಾದ ಗಾಯಗಳಾಗಿದ್ದು, ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದು ಚಿಕಿತ್ಸೆ ಪಡೆಯುತ್ತಿದ್ದಾರೆ. ಪುತ್ತೂರು ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲುಗೊಂಡಿದೆ.
ಬೈಕ್–ಬಸ್ ನಡುವೆ ಭೀಕರ ಅಪಘಾತ : ಬಸ್ಸಿನಡಿಗೆ ಸಿಲುಕಿದ ಬೈಕ್ – ಸವಾರನಿಗೆ ಗಂಭೀರ ಗಾಯ
