ಭಾರತ ನಿರಾಯಾಸ ಸೆಮಿ ಫೈನಲ್ ಪ್ರವೇಶ
ಆಡಿಲೇಡ್: ಟಿ-20 ವಿಶ್ವಕಪ್ನಲ್ಲಿ ಭಾರತ ತಂಡ ಜಿಂಬಾಬ್ವೆ ತಂಡದ ವಿರುದ್ಧ ಸೆಣಸುವ ಮುನ್ನವೇ ಸೆಮಿಫೈನಲ್ ಪ್ರವೇಶಿಸಿದೆ. ನೆದರ್ಲ್ಯಾಂಡ್ಸ್ ವಿರುದ್ಧದ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ 13 ರನ್ಗಳಿಂದ ಸೋಲಿಗೆ ಶರಣಾದ ನಂತರ ಭಾರತ ತಂಡಕ್ಕೆ ಅದೃಷ್ಟ ಖುಲಾಯಿಸಿತು. ಸೂಪರ್ ಲೀಗ್ 12ರ ಕೊನೆಯ ಪಂದ್ಯ ಆಡುವ ಮುನ್ನವೇ ಸೆಮಿ ಫೈನಲ್ಗೆ ಲಗ್ಗೆ ಇಟ್ಟಿರುವುದರಿಂದ ಇಂದು ಜಿಂಬಾಬ್ವೆ ವಿರುದ್ಧ ಒತ್ತಡ ರಹಿತವಾಗಿ ಆಡಬಹುದು.
ಸೆಮಿ ಫೈನಲ್ ಆಸೆಯನ್ನು ಕೈ ಬಿಟ್ಟಿದ್ದ ಪಾಕಿಸ್ಥಾನ ಮತ್ತು ಬಾಂಗ್ಲಾದ ಆಸೆ ಜೀವಂತವಾಗಿದ್ದು, ಇದೇ ಮೈದಾನದಲ್ಲಿ ನಡುವೆ ನಡೆಯಲಿರುವ ಪಂದ್ಯದಲ್ಲಿ ಗೆದ್ದವರು ಸೆಮಿಫೈನಲ್ ಪ್ರವೇಶಿಸಲಿದ್ದಾರೆ.
ಆಡಿಲೇಡ್ನಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ನೆದರ್ಲ್ಯಾಂಡ್ಸ್ 4 ವಿಕೆಟ್ ನಷ್ಟಕ್ಕೆ 158 ಗಳಿಸಿದರೆ, ದಕ್ಷಿಣ ಆಫ್ರಿಕಾ ತಂಡ 8 ವಿಕೆಟ್ ನಷ್ಟಕ್ಕೆ 145 ರನ್ ಗಳಿಸಲಷ್ಟೇ ಶಕ್ತವಾಯಿತು. ಇದರೊಂದಿಗೆ ದಕ್ಷಿಣ ಆಫ್ರಿಕಾ ತಂಡ ಟೂರ್ನಿಯಿಂದ ಹೊರ ಬಿದ್ದಿತು.