ಡಿಜಿಟಲ್‌ ಮಾಧ್ಯಮದ ಪತ್ರಕರ್ತರಿಗೆ ಕೇಂದ್ರ ಸರಕಾರದ ಮಾನ್ಯತೆ

ಹೊಸ ಕಾನೂನು ತರಲು ಚಿಂತನೆ

ಜೈಪುರ: ಡಿಜಿಟಲ್ ಮಾಧ್ಯಮಗಳ ನೋಂದಣಿ, ಕಾರ್ಯ ನಿರ್ವಹಣೆ ಹಾಗೂ ನಿಯಂತ್ರಣದ ಬಗ್ಗೆ ಹೊಸ ಕಾನೂನನ್ನು ಕೇಂದ್ರ ಸರ್ಕಾರ ಶೀಘ್ರದಲ್ಲಿ ಜಾರಿಗೆ ತರಲಿದೆ ಎಂದು ಕೇಂದ್ರ ಮಾಹಿತಿ ಮತ್ತು ಪ್ರಸಾರ ಖಾತೆ ಸಚಿವ ಅನುರಾಗ್ ಠಾಕೂರ್ ಹೇಳಿದ್ದಾರೆ.
ಹಿಂದೆ ಸುದ್ದಿಗಳ ಏಕಮುಖ ಸಂವಹನವಿತ್ತು, ಆದರೆ ವಿದ್ಯುನ್ಮಾನ ಮತ್ತು ಡಿಜಿಟಲ್ ಮಾಧ್ಯಮಗಳ ಬೆಳವಣಿಗೆಯೊಂದಿಗೆ, ಸುದ್ದಿ ಸಂವಹನವು ಬಹು ಆಯಾಮ ಪಡೆದುಕೊಂಡಿದೆ. ಈಗ ಒಂದು ಹಳ್ಳಿಯ ಸಣ್ಣ ಸುದ್ದಿಯೂ ಡಿಜಿಟಲ್ ಮಾಧ್ಯಮದ ಮೂಲಕ ರಾಷ್ಟ್ರೀಯ ವೇದಿಕೆಗೆ ತಲುಪುತ್ತದೆ ಎಂದು ಹೇಳಿದರು.
ದೇಶದಲ್ಲಿ ಡಿಜಿಟಲ್ ಮಾಧ್ಯಮಕ್ಕೆ ಉತ್ತಮ ಭವಿಷ್ಯವಿದೆ ಹಾಗೂ ಸವಾಲುಗಳು ಕೂಡ ಇವೆ. ಇವೆರಡನ್ನು ಸರಿದೂಗಿಸಲು ಹೊಸ ಕಾನೂನಿನ ಅವಶ್ಯಕತೆ ಇದೆ.ಬದಲಾವಣೆಗಳನ್ನು ಕಾನೂನಿನ ಮೂಲಕ ತರಬೇಕು. ವಿಶೇಷವಾಗಿ ಡಿಜಿಟಲ್ ಮಾಧ್ಯಮಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಅರ್ಹ ಪತ್ರಕರ್ತರಿಗೆ ಕೇಂದ್ರ ಸರ್ಕಾರದಿಂದ ಮಾನ್ಯತೆ ನೀಡುವ ಬಗ್ಗೆ ಚಿಂತಿಸಲಾಗುತ್ತಿದೆ. ಕೋವಿಡ್‌ನಿಂದ ಮೃತಪಟ್ಟ ಎಲ್ಲ ಪತ್ರಕರ್ತರಿಗೆ ಪರಿಹಾರ ನೀಡುವ ಬಗ್ಗೆ ಚರ್ಚಿಸಲಾಗುತ್ತಿದೆ ಎಂದು ಅವರು ಹೇಳಿದ್ದಾರೆ.
ಒಂದೇ ವಾರದಲ್ಲಿ ಪತ್ರಿಕೆ ನೋಂದಣಿ
ಪತ್ರಿಕೆಗಳ ನೋಂದಣಿ ಪ್ರಕ್ರಿಯೆಯನ್ನು ಸರಳಗೊಳಿಸಲಾಗುವುದು. ಕೇಂದ್ರ ಸರ್ಕಾರ ಪ್ರೆಸ್ ಮತ್ತು ರಿಜಿಸ್ಟ್ರೇಶನ್ ಕಾಯ್ದೆ 1867ರ ಬದಲಿಗೆ ಹೊಸ ಕಾನೂನನ್ನು ಶೀಘ್ರದಲ್ಲೇ ಜಾರಿಗೆ ತರಲಿದೆ. ಇದರಿಂದ ಒಂದು ವಾರದಲ್ಲಿ ನೋಂದಣಿಗೆ ಅವಕಾಶ ನೀಡಲಾಗುವುದು. ಇದು ಸದ್ಯ ನಾಲ್ಕು ತಿಂಗಳು ತೆಗೆದುಕೊಳ್ಳುತ್ತದೆ. ಮುದ್ರಣ, ಎಲೆಕ್ಟ್ರಾನಿಕ್, ಡಿಜಿಟಲ್ ಮಾಧ್ಯಮಕ್ಕೆ ಸಂಬಂಧಿಸಿದ ನೀತಿ ನಿರೂಪಣೆಗಳನ್ನು ಒಂದೇ ಸೂರಿನಡಿ ತರಲಾಗುವುದು ಎಂದು ಹೇಳಿದರು.









































































































































































error: Content is protected !!
Scroll to Top