ಕಾರ್ಕಳ : ಉಡುಪಿ ಬ್ರಹ್ಮಗಿರಿಯ ಲಯನ್ಸ್ ಕ್ಲಬ್, ಕುಂದಾಪುರ ಇಂಡಿಯನ್ ರೆಡ್ ಕ್ರಾಸ್ ಬ್ಲಡ್ ಬ್ಯಾಂಕ್, ಐಆರ್ಸಿಎಸ್ನ ಉಡುಪಿ ಮತ್ತು ಕಾರ್ಕಳ ಶಾಖೆ ಹಾಗೂ ಕಾರ್ಕಳ ಮಂಜುನಾಥ ಪೈ ಸ್ಮಾರಕ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಸಂಯುಕ್ತ ಆಶ್ರಯದಲ್ಲಿ ರಕ್ತದಾನ ಶಿಬಿರವು ನ. 30 ರಂದು ಬೆಳಗ್ಗೆ 9.30 ರಿಂದ 2ಗಂಟೆಯವರೆಗೆ ಕಾಲೇಜಿನ ಸಭಾಂಗಣದಲ್ಲಿ ನಡೆಯಲಿದೆ. ಕುಂದಾಪುರ ಇಂಡಿಯನ್ ರೆಡ್ ಕ್ರಾಸ್ ಬ್ಲಡ್ ಬ್ಯಾಂಕ್ನ ಅಧ್ಯಕ್ಷ ಎಸ್. ಜಯಕರ್ ಶೆಟ್ಟಿ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ಪ್ರಾಂಶುಪಾಲ ಡಾ. ಕಿರಣ್ ಎಂ. ಅಧ್ಯಕ್ಷತೆ ವಹಿಸಲಿರುವರು ಮತ್ತು ಬ್ರಹ್ಮಗಿರಿ ಲಯನ್ಸ್ ಕ್ಲಬ್ನ ಅಧ್ಯಕ್ಷ ಉಮೇಶ ನಾಯಕ್ ಉಪಸ್ಥಿತರಿರುವರು ಎಂದು ಆಯೋಜಕರು ಪ್ರಕಟನೆಯಲ್ಲಿ ತಿಳಿಸಿದೆ.