ಇನ್ಸ್ಟಾಗ್ರಾಂ ಸ್ನೇಹವನ್ನು ದುರ್ಬಳಕೆ ಮಾಡಿಕೊಂಡಿದ್ದ ಅಪರಾಧಿ
ಮಂಗಳೂರು : 13 ವರ್ಷದ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಬಸ್ ಚಾಲಕನಿಗೆ 20 ವರ್ಷ ಕಠಿಣ ಜೈಲು ಶಿಕ್ಷೆ ವಿಧಿಸಿ ನ್ಯಾಯಾಲಯ ತೀರ್ಪು ನೀಡಿದೆ. ಅಪರಾಧಿಗೆ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ಪೋಕ್ಸೊ ನ್ಯಾಯಾಧೀಶ ಕೆ. ಎಂ. ರಾಧಾಕೃಷ್ಣ ಸೋಮವಾರ 20 ವರ್ಷಗಳ ಕಠಿಣ ಜೈಲು ಶಿಕ್ಷೆ ಮತ್ತು 50 ಸಾವಿರ ರೂ. ದಂಡ ವಿಧಿಸಿದ್ದಾರೆ.
ಕಾವೂರು ಮರಕಡ ನಿವಾಸಿ ದಯಾನಂದ ದಾನಣ್ಣವರ್ ಅಲಿಯಾಸ್ ದಯಾನಂದ (30) ಎಂಬಾತಅಪರಾಧಿ.
ವಿಶೇಷ ಪಬ್ಲಿಕ್ ಪ್ರಾಸಿಕ್ಯೂಟರ್ ವೆಂಕಟರಮಣ ಸ್ವಾಮಿ ಈ ಪ್ರಕರಣದಲ್ಲಿ ಬಾಲಕಿ ಪರವಾಗಿ ವಾದಿಸಿದ್ದಾರೆ. ಆರೋಪಿ 13 ವರ್ಷದ ಬಾಲಕಿಯೊಂದಿಗೆ Instagram ಮೂಲಕ ಸ್ನೇಹ ಬೆಳೆಸಿದ್ದ. ಪರಸ್ಪರ ಚಾಟ್ ಮಾಡುತ್ತಿದ್ದರು. ಜನವರಿ 27, 2022 ರಂದು, ಅವಳಿಗೆ ಕರೆ ಮಾಡಿ ತನ್ನೊಂದಿಗೆ ಬರುವಂತೆ ಆಹ್ವಾನಿಸಿದ್ದಾನೆ. ಆದರೆ, ಬಾಲಕಿ ನಿರಾಕರಿಸಿದ್ದಾಳೆ. ಮರುದಿನ ತನ್ನೊಂದಿಗೆ ಬರುವಂತೆ ಅವಳನ್ನು ಒಪ್ಪಿಸಲು ಅವನು ಯಶಸ್ವಿಯಾದ. ಅವಳು ಬಸ್ ನಿಲ್ದಾಣದ ಬಳಿ ಬಂದಾಗ ಆಟೋರಿಕ್ಷಾದಲ್ಲಿ ಹಂಪನಕಟ್ಟೆಯ ಲಾಡ್ಜ್ಗೆ ಕರೆದುಕೊಂಡು ಹೋಗಿ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಬಳಿಕ ಅವಳನ್ನು ಅವಳ ಮನೆಯ ಬಳಿ ಬಿಟ್ಟುಹೋಗಿ ಐಾರಿಗೂಹೇಳದಂತೆ ಬೆದರಿಕೆ ಹಾಕಿದ್ದ.
ಘಟನೆ ಬಗ್ಗೆ ತಿಳಿದ ಬಾಲಕಿಯ ಪೋಷಕರು ಮರುದಿನ ಪೊಲೀಸರಿಗೆ ದೂರು ನೀಡಿದ್ದು, ಮಹಿಳಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.