ಮಣಿಪಾಲ್‌ ಸಮಗ್ರ ಕ್ಯಾನ್ಸರ್ ಆರೈಕೆ ಕೇಂದ್ರಕ್ಕೆ ಎಂಎಎಸ್‌ಸಿಸಿ ಮನ್ನಣೆ

ವಿಶೇಷ ಮನ್ನಣೆಗೆ ಪಾತ್ರವಾದ ಏಷ್ಯಾದ ಮೊದಲ ಆಸ್ಪತ್ರೆ

ಮಣಿಪಾಲ : ಕಸ್ತೂರ್ಬಾ ಆಸ್ಪತ್ರೆ ಮಣಿಪಾಲದ ಸಮಗ್ರ ಕ್ಯಾನ್ಸರ್ ಆರೈಕೆ ಕೇಂದ್ರವನ್ನು (MCCCC) ಕ್ಯಾನ್ಸರ್‌ ಬೆಂಬಲಿತ ಆರೈಕೆಯಲ್ಲಿ ಶ್ರೇಷ್ಠತೆಯ ಕೇಂದ್ರವೆಂದು ‘ಮಲ್ಟಿನ್ಯಾಷನಲ್ ಅಸೋಸಿಯೇಷನ್ ಆಫ್ ಸಪೋರ್ಟಿವ್ ಕೇರ್ ಇನ್ ಕ್ಯಾನ್ಸರ್ (MASCC)ನಿಂದ ಗೊತ್ತುಪಡಿಸಲಾಗಿದೆ. ಈ ಪ್ರತಿಷ್ಠಿತ ಮನ್ನಣೆ ರೋಗಿಗಳಿಗೆ ಅಸಾಧಾರಣವಾದ ಕ್ಯಾನ್ಸರ್ ಆರೈಕೆಯನ್ನು ಒದಗಿಸಲು ಮಣಿಪಾಲ ಸಮಗ್ರ ಕ್ಯಾನ್ಸರ್ ಆರೈಕೆ ಕೇಂದ್ರದ ಅಚಲ ಬದ್ಧತೆಗೆ ಸಾಕ್ಷಿಯಾಗಿದೆ. ಸಂಸ್ಥೆ ಈ ನಿಯೋಜಿತ ಮನ್ನಣೆ ಪಡೆದ ಏಷ್ಯಾದ ಮೊದಲ ಆಸ್ಪತ್ರೆಯಾಗಿದೆ.
ಮಣಿಪಾಲ ಸಮಗ್ರ ಕ್ಯಾನ್ಸರ್ ಆರೈಕೆ ಕೇಂದ್ರದ ಸಂಯೋಜಕ, ಸಹ ಡೀನ್ ಮತ್ತು ಉಪಶಾಮಕ ಔಷಧ ಮತ್ತು ಸಪೋರ್ಟಿವ್ ಕೇರ್ ಮುಖ್ಯಸ್ಥ ಡಾ.ನವೀನ್ ಎಸ್. ಸಾಲಿನ್ಸ್ ಮತ್ತು ತಂಡದವರಿಗೆ ಪ್ರಮಾಣಪತ್ರವನ್ನು ಹಸ್ತಾಂತರಿಸಿ ಮಾತನಾಡಿದ ಮಾಹೆ ಮಣಿಪಾಲದ ಸಹ ಕುಲಾಧಿಪತಿ ಡಾ.ಎಚ್.ಎಸ್. ಬಲ್ಲಾಳ್, ಮಲ್ಟಿನ್ಯಾಷನಲ್ ಅಸೋಸಿಯೇಷನ್ ಆಫ್ ಸಪೋರ್ಟಿವ್ ಕೇರ್ ಇನ್ ಕ್ಯಾನ್ಸರ್ ಸಂಸ್ಥೆಯಿಂದ ಈ ಮನ್ನಣೆ ದೊರಕಿರುವುದು ತುಂಬಾ ಸಂತೋಷವಾಗುತ್ತಿದೆ. ಇದು ರೋಗಿಗಳಿಗೆ ಅಸಾಧಾರಣವಾದ ಆರೈಕೆಯನ್ನು ಒದಗಿಸುವ ನಮ್ಮ ಅಚಲವಾದ ಬದ್ಧತೆಗೆ ಸಾಕ್ಷಿ. ನಮ್ಮ ತಂಡ ಕ್ಯಾನ್ಸರ್‌ನಲ್ಲಿ ಬೆಂಬಲಿತ ಆರೈಕೆಯ ವಿಜ್ಞಾನವನ್ನು ಅಭಿವೃದ್ಧಿಪಡಿಸಲು ಮತ್ತು ಸುಧಾರಿಸಲು ಸಮರ್ಪಿತವಾಗಿದೆ. ಇದರಿಂದ ರೋಗಿಗಳು ಮತ್ತು ಅವರ ಕುಟುಂಬಗಳಿಗೆ ಸುಧಾರಿತ ಜೀವನದ ಗುಣಮಟ್ಟ ಒದಗಿಸಲು ಸಾಧ್ಯವಾಗುತ್ತದೆ ಎಂದಿದ್ದಾರೆ.
ಮಲ್ಟಿನ್ಯಾಷನಲ್ ಅಸೋಸಿಯೇಷನ್ ಆಫ್ ಸಪೋರ್ಟಿವ್ ಕೇರ್ ಇನ್ ಕ್ಯಾನ್ಸರ್ ಅಂತಾರಾಷ್ಟ್ರೀಯ ಮಟ್ಟದ ಬಹು ಆಯಾಮದ ಸಂಸ್ಥೆಯಾಗಿದ್ದು, ಕ್ಯಾನ್ಸರ್‌ನಲ್ಲಿ ಬೆಂಬಲಿತ ಆರೈಕೆಯ ಪ್ರಗತಿಗೆ ಮೀಸಲಾಗಿದೆ. ಮಣಿಪಾಲ್ ಸಮಗ್ರ ಕ್ಯಾನ್ಸರ್ ಆರೈಕೆ ಕೇಂದ್ರದಲ್ಲಿ ರೋಗಿಗಳು ಮತ್ತು ಅವರ ಕುಟುಂಬಗಳಿಗೆ ಅದರ ಅಸಾಧಾರಣ ಕಾಳಜಿಯನ್ನು ಪ್ರತಿಬಿಂಬಿಸುತ್ತದೆ. ಕೇಂದ್ರದಲ್ಲಿ ಕ್ಯಾನ್ಸರ್ ಸಂಬಂಧಿತ ಎಲ್ಲಾ ಚಿಕಿತ್ಸೆಗಳು, ಕಿಮೊಥೆರಪಿ, ವಿಕಿರಣ ಚಿಕಿತ್ಸೆ, ಶಸ್ತ್ರಚಿಕಿತ್ಸೆ ಮತ್ತು ಉಪಶಾಮಕ ಆರೈಕೆ ಸೇರಿದಂತೆ ಸಮಗ್ರ ಶ್ರೇಣಿಯ ಸೇವೆಗಳನ್ನು ಒದಗಿಸುತ್ತದೆ. ಇದರ ಅನುಭವಿ ಮತ್ತು ಸಮರ್ಪಿತ ವೈದ್ಯರು, ದಾದಿಯರು ಮತ್ತು ಇತರ ಆರೋಗ್ಯ ವೃತ್ತಿಪರರ ತಂಡವು ಪ್ರತಿ ರೋಗಿಯ ವಿಶಿಷ್ಟ ಅಗತ್ಯಗಳನ್ನು ಪೂರೈಸುವ ಮತ್ತು ಕಾಳಜಿಯ ಆರೈಕೆಯನ್ನು ಒದಗಿಸಲು ಸಹಕಾರಿಯಾಗಿ ಕಾರ್ಯನಿರ್ವಹಿಸುತ್ತಿದೆ ಎಂದರು.
ತಂಡವನ್ನು ಅಭಿನಂದಿಸಿ ಮಾತನಾಡಿದ ಮಾಹೆ ಮಣಿಪಾಲದ ಉಪಕುಲಪತಿ, ಲೆಫ್ಟಿನೆಂಟ್ ಜನರಲ್ (ಡಾ.) ಎಂ.ಡಿ. ವೆಂಕಟೇಶ್ ಮಲ್ಟಿನ್ಯಾಷನಲ್ ಅಸೋಸಿಯೇಷನ್ ಆಫ್ ಸಪೋರ್ಟಿವ್ ಕೇರ್ ಇನ್ ಕ್ಯಾನ್ಸರ್ ಗೌರವವನ್ನು ಪಡೆದಿರುವುದು ನಮಗೆ ಸಂತೋಷವಾಗಿದೆ. ಇದು ನಮ್ಮ ತಂಡದ ಕಠಿಣ ಪರಿಶ್ರಮ ಮತ್ತು ಕ್ಯಾನ್ಸರ್ ರೋಗಿಗಳಿಗೆ ಮತ್ತು ಅವರ ಕುಟುಂಬಗಳಿಗೆ ಒದಗಿಸುವ ಬದ್ಧತೆಗೆ ಸಿಕ್ಕಿದ ಗೌರವವಾಗಿದೆ. ಉತ್ತಮ ಗುಣಮಟ್ಟದ ಆರೈಕೆ, ಕ್ಯಾನ್ಸರ್ ರೋಗಿಗಳಿಗೆ ಬೆಂಬಲಿತ ಆರೈಕೆಯ ವಿಜ್ಞಾನವನ್ನು ಅಭಿವೃದ್ಧಿಪಡಿಸಲು ಮತ್ತು ರೋಗಿಗಳ ಫಲಿತಾಂಶಗಳನ್ನು ಹೆಚ್ಚಿಸಲು ನಾವು ಮೀಸಲಾಗಿದ್ದೇವೆ ಎಂದರು.
ಮಾಹೆ ಮಣಿಪಾಲದ ಸಹ ಕುಲಪತಿ (ಆರೋಗ್ಯ ವಿಜ್ಞಾನ) ಡಾ. ಶರತ್ ಕೆ. ರಾವ್ ಮಾತನಾಡಿ, ಮಣಿಪಾಲ್ ಸಮಗ್ರ ಕ್ಯಾನ್ಸರ್ ಆರೈಕೆ ಕೇಂದ್ರದಲ್ಲಿ ಅತ್ಯಾಧುನಿಕ ಕ್ಯಾನ್ಸರ್ ಆರೈಕೆ ಸೌಲಭ್ಯವಿದ್ದು, ಇದು ಈ ಪ್ರದೇಶದ ರೋಗಿಗಳಿಗೆ ಸಮಗ್ರ ಕ್ಯಾನ್ಸರ್ ಆರೈಕೆ ಸೇವೆಗಳನ್ನು ನೀಡುತ್ತಿದೆ . ಕೇಂದ್ರವು ಆಧುನಿಕ ಸುಧಾರಿತ ತಂತ್ರಜ್ಞಾನವನ್ನು ಹೊಂದಿದೆ ಮತ್ತು ಅನುಭವಿ ವೈದ್ಯರು, ದಾದಿಯರು ಮತ್ತು ಇತರ ಆರೋಗ್ಯ ವೃತ್ತಿಪರರ ತಂಡವನ್ನು ಹೊಂದಿದೆ. ಅವರು ಪ್ರತಿ ರೋಗಿಯ ಎಲ್ಲಾ ಅಗತ್ಯಗಳನ್ನು ಪೂರೈಸುವ ವೈಯಕ್ತಿಕ ಆರೈಕೆಯನ್ನು ಒದಗಿಸಲು ಸಮರ್ಪಿತರಾಗಿದ್ದರೆ. ಎಂದರು.
ಕೆಎಂಸಿ ಡೀನ್ ಡಾ.ಪದ್ಮರಾಜ್ ಹೆಗ್ಡೆ, ಮಾಹೆ ಮಣಿಪಾಲದ ಬೋಧನಾ ಆಸ್ಪತ್ರೆಗಳ ಸಿಒಒ ಡಾ. ಆನಂದ್ ವೇಣುಗೋಪಾಲ್, ವೈದ್ಯಕೀಯ ಅಧೀಕ್ಷಕ ಡಾ. ಅವಿನಾಶ್ ಶೆಟ್ಟಿ, ಉಪ ವೈದ್ಯಕೀಯ ಅಧೀಕ್ಷಕ ಡಾ. ಶಿರನ್ ಶೆಟ್ಟಿ ಮತ್ತು ಮಣಿಪಾಲ ಸಮಗ್ರ ಆರೈಕೆ ಕೇಂದ್ರದ ಮುಖ್ಯಸ್ತರು ಉಪಸ್ಥಿತರಿದ್ದರು.



































































































error: Content is protected !!
Scroll to Top