ಹೆಬ್ರಿ : ಶಿವಪುರ ಗ್ರಾಮದ ಸ್ಯಾಕ್ಸೋಫೋನ್ ಕಲಾವಿದೆ ಭಾರತಿ ಗೋಪಾಲ್ ಅವರಿಗೆ ಜುವಾರಿ ನಗರ ಕನ್ನಡ ಸಂಘ ಹಾಗೂ ಜನ್ಮಭೂಮಿ ಫೌಂಡೇಶನ್ ಬೆಂಗಳೂರು ಇವರ ಸಹಯೋಗದಲ್ಲಿ ಗೋವಾದಲ್ಲಿ ನಡೆದ ವಸಂತೋತ್ಸವ ಕಾರ್ಯಕ್ರಮದಲ್ಲಿ ಪದ್ಮಶ್ರೀ ಪುರಸ್ಕೃತೆ ತುಳಸಿ ಗೌಡ ಅವರಿಂದ ಭಾರತ ಗೌರವ ಪ್ರಶಸ್ತಿ ಪ್ರದಾನ ಮಾಡಲಾಯಿತು. ಈ ಸಂದರ್ಭ ಸಾರ್ವಜನಿಕ ಗ್ರಂಥಾಲಯ ಇಲಾಖೆಯ ನಿರ್ದೇಶಕ ಸತೀಶ್ ಕುಮಾರ್ ಹೊಸಮನಿ. ಜುವಾರಿ ನಗರ ಕನ್ನಡ ಸಂಘದ ಅಧ್ಯಕ್ಷ ಶಿವಾನಂದ ಬಿಂಗಿ ಹಾಗೂ ಜನ್ಮಭೂಮಿ ಫೌಂಡೇಶನ್ನ ಕಾರ್ಯದರ್ಶಿ ಮಾರುತಿ ಬಡಿಗೇರ್ ಉಪಸ್ಥಿತರಿದ್ದರು.
ಸ್ಯಾಕ್ಸೋಫೋನ್ ಕಲಾವಿದೆ ಭಾರತಿ ಗೋಪಾಲ್ ಅವರಿಗೆ ಭಾರತ ಗೌರವ ಪ್ರಶಸ್ತಿ



















