ಪುರಸಭೆ ಸ್ಥಾಯಿ ಸಮಿತಿಯ ನೂತನ ಅಧ್ಯಕ್ಷ ಪ್ರದೀಪ್‌ ರಾಣೆಗೆ ಅಭಿನಂದನೆ

ಕಾರ್ಕಳ : ಪುರಸಭೆ ಸ್ಥಾಯಿ ಸಮಿತಿಯ ನೂತನ ಅಧ್ಯಕ್ಷರಾಗಿ ಆಯ್ಕೆಯಾಗಿರುವ 13 ನೇ ವಾರ್ಡಿನ ಚುನಾಯಿತ ಸದಸ್ಯ ಪ್ರದೀಪ್ ರಾಣೆಯವರಿಗೆ ಕಾರ್ಕಳ ನಗರ ಬಿಜೆಪಿ ವತಿಯಿಂದ ಅಭಿನಂದನಾ ಸಮಾರಂಭ ಮಾ. 27 ರಂದು ಕಾಳಿಕಾಂಬ ದೇವಸ್ಥಾನದ ಬಳಿ ಜರುಗಿತು. ಪುರಸಭಾ ಮಾಜಿ ಸದಸ್ಯ ಪ್ರಕಾಶ್‌ ರಾವ್‌ ಮಾತನಾಡಿ, ಪ್ರದೀಪ್‌ ರಾಣೆಯವರ ಜನಪರ ಕಾರ್ಯಚಟುವಟಿಕೆಗಳನ್ನು ಗುರುತಿಸಿ ಪಕ್ಷ ಪುರಸಭೆಯ ಸ್ಥಾಯಿ ಸಮಿತಿಯ ಅಧ್ಯಕ್ಷ ಸ್ಥಾನವನ್ನು ನೀಡಿದೆ. ಸಿಕ್ಕಿರುವ ಅವಕಾಶವನ್ನು ಸದುಪಯೋಗಪಡಿಸಿಕೊಂಡು ಇನ್ನಷ್ಟು ಸಮಾಜಮುಖಿ ಕೆಲಸ ಕಾರ್ಯಗಳನ್ನು ಮಾಡುವಂತೆ ಶುಭ ಹಾರೈಸಿದರು.

ಅಭಿನಂದನೆ ಸ್ವೀಕರಿಸಿ ಮಾತನಾಡಿದ ಪ್ರದೀಪ್‌ ರಾಣೆ, ಅಧಿಕಾರ ಜವಾಬ್ದಾರಿಯನ್ನು ಹೆಚ್ಚಿಸಿದೆ. ಈ ನಿಟ್ಟಿನಲ್ಲಿ ಪಕ್ಷ ನನ್ನ ಮೇಲೆ ಇಟ್ಟಿರುವ ನಂಬಿಕೆ ವಿಶ್ವಾಸಗಳಿಗೆ ಚ್ಯುತಿ ಬಾರದಂತೆ ಜವಾಬ್ದಾರಿ ನಿಭಾಯಿಸುವೆ. ಸಚಿವ ಸುನೀಲ್‌ ಕುಮಾರ್‌ ಹಾಗೂ ಪಕ್ಷದ ಹಿರಿಯ ಮಾರ್ಗದರ್ಶನದಲ್ಲಿ ಇನ್ನಷ್ಟು ಹೆಚ್ಚಿನ ಕಾರ್ಯನಿರ್ವಹಿಸಲು ಅವಕಾಶ ದೊರೆತಿರುವುದು ಭಾಗ್ಯ ಎಂದು ಹರ್ಷ ವ್ಯಕ್ತಪಡಿಸಿದರು. ಸಮಾರಂಭದ ಅಧ್ಯಕ್ಷತೆಯನ್ನು ನಗರ ಬಿಜೆಪಿ ಅಧ್ಯಕ್ಷ ರವೀಂದ್ರ ಮೊಯ್ಲಿ ವಹಿಸಿದ್ದರು. ಈ ಸಂದರ್ಭ ವಾರ್ಡ್ ಅಧ್ಯಕ್ಷ ಹರೀಶ್ ದೇವಾಡಿಗ, ನಗರ ಪ್ರಧಾನ ಕಾರ್ಯದರ್ಶಿ ನಿರಂಜನ್ ಜೈನ್, ನಾಮ ನಿರ್ದೇಶಿತ ಸದಸ್ಯ ಸಂತೋಷ್ ರಾವ್, ಉದ್ಯಮಿ ಜಯಂತ್ ಭಂಡಾರಿ, ಪ್ರಸಾದ್ ದೇವಾಡಿಗ, ಪುರಸಭಾ ಸದಸ್ಯರು ಹಾಗೂ ಪಕ್ಷದ ಪ್ರಮುಖರು ಉಪಸ್ಥಿತರಿದ್ದರು.





























































































































































































































error: Content is protected !!
Scroll to Top